ಮನರಂಜನೆ

ಸುದೀಪ್‍ ಹುಟ್ಟುಹಬ್ಬಕ್ಕೆ ಅನೂಪ್‍ ಭಂಡಾರಿ ಹೊಸ ಸುದ್ದಿ

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.

ಇನ್ನೇನು, ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್‍ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್‍ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್‍ ಸರ್‍ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್‍ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್‍ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್‍ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್‍ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್‍ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್‍ ನಿರ್ಮಾಣದಲ್ಲಿ ಅನೂಪ್‍ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್‍ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್‍ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್‍ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.

 

ಭೂಮಿಕಾ

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

21 mins ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

3 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

6 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

9 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

9 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

9 hours ago