ಮನರಂಜನೆ

ಸುದೀಪ್‍ ಹುಟ್ಟುಹಬ್ಬಕ್ಕೆ ಅನೂಪ್‍ ಭಂಡಾರಿ ಹೊಸ ಸುದ್ದಿ

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.

ಇನ್ನೇನು, ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್‍ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್‍ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್‍ ಸರ್‍ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್‍ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್‍ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್‍ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್‍ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್‍ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್‍ ನಿರ್ಮಾಣದಲ್ಲಿ ಅನೂಪ್‍ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್‍ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್‍ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್‍ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.

 

ಭೂಮಿಕಾ

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago