ಮನರಂಜನೆ

ಅನುಷ್ಕಾ ಶೆಟ್ಟಿಯ ಹೊಸ ಚಿತ್ರಕ್ಕೆ ಸಿಕ್ತು ಹೊಸ ಬಿಡುಗಡೆ ದಿನಾಂಕ

ಕಳೆದ ವರ್ಷ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಘಾಟಿ’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಅದರ ಪ್ರಕಾರ, ಈ ವರ್ಷ ಏಪ್ರಿಲ್‍.18ರಂದು ಚಿತ್ರ ಬಿಡುಗಡೆ ಆಗಬೇಕಿತ್ತು.

ಏಪ್ರಿಲ್‍ ಮುಗಿದು ಜೂನ್‍ ಬಂದರೂ,ಚಿತ್ರ ಮಾತ್ರ ಬಿಡುಗಡೆ ಆಗಿರಲಿಲ್ಲ. ಈ ಚಿತ್ರದ ಬಿಡುಗಡೆ ಯಾವಾಗ ಎಂದು ಅನುಷ್ಕಾ ಶೆಟ್ಟಿ ಅಭಿಮಾನಿಗಳು ತಲೆಕೆಡಿಸಿಕೊಂಡು ಕುಳಿತಿರುವಾಗಲೇ, ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಜುಲೈ.11ರಂದು ಬಿಡುಗಡೆಯಾಗುತ್ತಿದೆ.

‘ಘಾಟಿ’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಈ ಚಿತ್ರಕ್ಕೆ ಅನುಷ್ಕಾ ಶೆಟ್ಟಿ, ಕ್ರಿಷ್ ಜಾಗರ್ಲಮುಡಿ ಅವರೊಂದಿಗೆ ಕೈಜೋಡಿಸಿದ್ದಾರೆ. UV ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ನಿರ್ಮಿಸಿದ್ದಾರೆ. ‘ವೇದಂ’ ಯಶಸ್ಸಿನ ನಂತರ ಇದು ಅನುಷ್ಕಾ ಮತ್ತು ಕ್ರಿಷ್ ಅವರ ಎರಡನೇ‌ ಚಿತ್ರವಾಗಿದೆ. UV ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಇದು ಅನುಷ್ಕಾ ಅವರ ನಾಲ್ಕನೇ ಸಿನಿಮಾ ಎನ್ನುವುದು ವಿಶೇಷ.

‘ಘಾಟಿ’ ಚಿತ್ರಕ್ಕೆ ‘ವಿಕ್ಟಿಮ್, ಕ್ರಿಮಿನಲ್, ಲೆಜೆಂಡ್’ ಎಂಬ ಅಡಿಬರಹ ಇರುವ ಈ ಚಿತ್ರದಲ್ಲಿ ಮಾನವೀಯತೆ, ಜೀವನ ಹೋರಾಟ ಮತ್ತು ಮುಕ್ತಿಯ ಕುರಿತ ಕಥಾಹಂದರ ಹೊಂದಿದೆ. ಚಿತ್ರದ ಬಗ್ಗೆ ಚಿತ್ರತಂಡ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಆದರೆ, ಇದೊಂದು ಸಸ್ಪೆನ್ಸ್ ಮತ್ತು ಆ್ಯಕ್ಷನ್‍ ಥ್ರಿಲ್ಲರ್ ಚಿತ್ರ ಎಂದು ಹೇಳಲಾಗುತ್ತಿದೆ.

‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಜೊತೆಗೆ ವಿಕ್ರಮ್ ಪ್ರಭು, ರಮ್ಯಾ ಕೃಷ್ಣ, ಜಗಪತಿ ಬಾಬು, ಜಾನ್‍ ವಿಜಯ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಮನೋಜ್ ರೆಡ್ಡಿ ಕಟ್ಟಾಸನಿ ಛಾಯಾಗ್ರಹಣ, ನಾಗವಲ್ಲಿಸ ವಿದ್ಯಾ ಸಾಗರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

14 hours ago