ಮನರಂಜನೆ

ಅಪರ್ಣ ವಸ್ತಾರೆ ನಿಧನ; ‘ಗ್ರಾಮಾಯಣ’ದ ಕಥೆಯೇನು?

ಕೆಲವು ದಿನಗಳ ಹಿಂದೆ ಖ್ಯಾತ ನಟಿ ಮತ್ತು ನಿರೂಪಕಿಯಾದ ಅಪರ್ಣ ವಸ್ತಾರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣ ನಿಧನಕ್ಕೆ ಇಡೀ ರಾಜ್ಯವೇ ಸಂತಾಪ ಸೂಚಿಸಿದೆ. ಈ ಮಧ್ಯೆ, ‘ಗ್ರಾಮಾಯಣ’ ಚಿತ್ರದ ಕಥೆ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

ಪುಟ್ಟಣ್ಣ ಕಣಗಾಲ್‍ ನಿರ್ದೇಶನದ ‘ಮಸಣದ ಹೂವು’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡ ಅಪರ್ಣ್, ಆ ನಂತರ ಕೆಲವು ಬೆರಳಣಿಕೆಯಷ್ಟು ಚಿತ್ರಗಳಲ್ಲಿ ನಟಿಸಿದ್ದರು. ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾದ ವಿಜಯ್ ರಾ‍ಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’ ಎಂಬ ಚಿತ್ರದಲ್ಲಿ ನಟಿಸಿದ್ದರು. ಇದಲ್ಲದೆ ವಿನಯ್ ರಾಜಕುಮಾರ್‍ ಅಭಿನಯದ ‘ಗ್ರಾಮಾಯಣ’ ಚಿತ್ರದಲ್ಲೂ ಅವರ ಹೆಸರಿದೆ. ಚಿತ್ರೀಕರಣ ಇನ್ನೂ ಪೂರ್ತಿಯಾಗಿ ಮುಗಿದಿಲ್ಲ. ಹೀಗಿರುವಾಗ, ಅವರ ನಿಧನದಿಂದ ಚಿತ್ರದ ಕಥೆಯೇನು? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ.

ನಿರ್ದೇಶಕ ದೇವನೂರು ಚಂದ್ರು ಹೇಳುವಂತೆ, ಅಪರ್ಣ ಅವರು ತಮ್ಮ ಕೆಲಸವನ್ನು 2023ರಲ್ಲಿಯಾ ಮುಗಿಸಿದ್ದಾರಂತೆ. ಮಿಕ್ಕಂತೆ ಒಂದಿಷ್ಟು ಪ್ಯಾಚ್‍ ವರ್ಕ್ ಬಾಕಿ ಇದ್ದು, ಮುಂದೆ ನೋಡಿಕೊಂಡು ಅದನ್ನು ಚಿತ್ರೀಕರಿಸುವ ಯೋಚನೆಯಲ್ಲಿದ್ದರಂತೆ. ಆದರೆ, ಈಗಿರುವ ಫುಟೇಜ್‍ ಸಾಕಷ್ಟು ಇರುವುದರಿಂದ ಇನ್ನೇನು ಅವಶ್ಯಕತೆ ಇಲ್ಲ ಎಂಬುದು ಅವರ ಅಭಿಪ್ರಾಯ. ಮಿಕ್ಕಂತೆ ಅಪರ್ಣ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದು, ಇದೇ ಅವರ ಕೊನೆಯ ಚಿತ್ರವಾಗಿ ಹೋಯಿತು ಎಂದು ಬೇಸರ ವ್ಯಕ್ತಪಡಿಸುತ್ತಾರೆ.


ಅಪರ್ಣ ಅವರು ತಮ್ಮ ಧ್ವನಿಗಾಗಿ ಗುರುತಿಸಿಕೊಂಡವರು. ಅವರ ನಿಧನದಿಂದ ಅವರ ಪಾತ್ರಕ್ಕೆ ಬೇರೆ ಯಾರಾದರೂ ಡಬ್‍ ಮಾಡುತ್ತಾರಾ? ಎಂಬ ಪ್ರಶ್ನೆ ಬರಬಹುದು. ಹಾಗೇನಿಲ್ಲವಂತೆ. ಚಿತ್ರೀಕರ ಸಮಯದಲ್ಲಿ ರೆಕಾರ್ಡ್ ಆದ ಧ್ವನಿಯನ್ನೇ ಚಿತ್ರದಲ್ಲೂ ಬಳಸಿಕೊಳ್ಳಲಾಗುತ್ತದಂತೆ. ‘ಗ್ರಾಮಾಯಣ’ ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ ಅವರ ತಾಯಿಯಾಗಿ ಅಪರ್ಣ ಕಾಣಿಸಿಕೊಂಡಿದ್ದು, ಸುಮಾರು 15 ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರದಲ್ಲಿ ಅವರು ಇದುವರೆಗೂ ಕಾಣಿಸಿಕೊಳ್ಳದ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ.

ವಿನಯ್ ರಾಜಕುಮಾರ್‌ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಕಳೆದ ವರ್ಷ ಚಾಲನೆ ಸಿಕ್ಕಿತ್ತು. ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ ಗ್ರಾಮಾಯಣ ಚಿತ್ರದ ಕಥೆ. ಈ ಚಿತ್ರವನ್ನು ಮನೋಹರ್ ನಾಯ್ಡು ಮತ್ತು ಕೆ.ಪಿ. ಶ್ರೀಕಾಂತ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

‘ಗ್ರಾಮಾಯಣ’ ಚಿತ್ರದಲ್ಲಿ ವಿನಯ್ ರಾಜ್ಕುಮಾರ್ಗೆ ನಾಯಕಿಯಾಗಿ ಮೇಘಾ ಶೆಟ್ಟಿ ನಟಿಸುತ್ತಿದ್ದು, ಮಿಕ್ಕಂತೆ ಅಪರ್ಣ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ, ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಯಶಸ್ವಿನಿ ಅಂಚಲ್ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

37 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

1 hour ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

1 hour ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

1 hour ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago