ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್ ಅಗಿದ್ದು, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ.
ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, ಈ ಸಿನಿಮಾ ನೋಡಿ ಪುನೀತ್ ಮತ್ತೆ ವಾಪಸ್ ಬಂದು ಬಿಡುತ್ತಾನೋ ಅನ್ನಿಸಿತ್ತು ಎಂದು ಕಣ್ಣೀರಾದರು.
ಅಭಿಮಾನಿಗಳ ಹರುಷ ನೋಡಿದರೆ ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ ಆಗತ್ತದೆ. 23 ವರ್ಷದ ಹಿಂದೆ ಈ ಸಿನಿಮಾ ರಿಲೀಸ್ ಆದಾಗ ತಮ್ಮ ಜೊತೆ ಅಪ್ಪಾಜಿ, ಅಮ್ಮ, ಅಪ್ಪು ಜೊತೆಲಿದ್ದ ಆ ದಿನಗಳು ನೆನಪಾಗುತ್ತವೆ. ಇಷ್ಟು ವರ್ಷಗಳಾದರೂ ಅಪ್ಪು ಸಿನಿಮಾದ ಡೈಲಾಗ್, ಲಿರಿಕ್ಸ್ನನ್ನು ಅಭಿಮಾನಿಗಳು ಮರೆತಿಲ್ಲ. ಎಲ್ಲರೂ ಅಪ್ಪುನ ಸಂಭ್ರಮಿಸಿದರು ಎಂದಿದ್ದಾರೆ.
ಪುನೀತ್ ಈಗ ಇಲ್ಲ. ಅಪ್ಪು ಸಿನಿಮಾ ನೋಡಿ ವಾಪಸ್ ಬಂದು ಬಿಡ್ತನೇನೋ ಅನ್ನಸ್ತು. ಅಪ್ಪು ದೈಹಿಕವಾಗಿ ಇಲ್ಲದಿದ್ದರೂ, ಸಿನಿಮಾ ಮೂಲಕ ನಮ್ಮ ಜೊತೆಯಲ್ಲಿ ಇರುತ್ತಾರೆ. ಹೀಗೆ ಅವರ ಸಿನಿಮಾ ರಿ-ರಿಲೀಸ್ ಮಾಡಿ ನೋಡ್ತಾ ಇರೋಣ ಎಂದು ಹೇಳಿದರು.
ʼಅಪ್ಪುʼ ಸಿನಿಮಾದಲ್ಲಿ ಪುನೀತ್ಗೆ ರಕ್ಷಿತಾ ನಾಯಕಿಯಾಗಿ ನಟಿಸಿದ್ದು, ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…