ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್ ಅಗಿದ್ದು, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ.
ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, ಈ ಸಿನಿಮಾ ನೋಡಿ ಪುನೀತ್ ಮತ್ತೆ ವಾಪಸ್ ಬಂದು ಬಿಡುತ್ತಾನೋ ಅನ್ನಿಸಿತ್ತು ಎಂದು ಕಣ್ಣೀರಾದರು.
ಅಭಿಮಾನಿಗಳ ಹರುಷ ನೋಡಿದರೆ ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ ಆಗತ್ತದೆ. 23 ವರ್ಷದ ಹಿಂದೆ ಈ ಸಿನಿಮಾ ರಿಲೀಸ್ ಆದಾಗ ತಮ್ಮ ಜೊತೆ ಅಪ್ಪಾಜಿ, ಅಮ್ಮ, ಅಪ್ಪು ಜೊತೆಲಿದ್ದ ಆ ದಿನಗಳು ನೆನಪಾಗುತ್ತವೆ. ಇಷ್ಟು ವರ್ಷಗಳಾದರೂ ಅಪ್ಪು ಸಿನಿಮಾದ ಡೈಲಾಗ್, ಲಿರಿಕ್ಸ್ನನ್ನು ಅಭಿಮಾನಿಗಳು ಮರೆತಿಲ್ಲ. ಎಲ್ಲರೂ ಅಪ್ಪುನ ಸಂಭ್ರಮಿಸಿದರು ಎಂದಿದ್ದಾರೆ.
ಪುನೀತ್ ಈಗ ಇಲ್ಲ. ಅಪ್ಪು ಸಿನಿಮಾ ನೋಡಿ ವಾಪಸ್ ಬಂದು ಬಿಡ್ತನೇನೋ ಅನ್ನಸ್ತು. ಅಪ್ಪು ದೈಹಿಕವಾಗಿ ಇಲ್ಲದಿದ್ದರೂ, ಸಿನಿಮಾ ಮೂಲಕ ನಮ್ಮ ಜೊತೆಯಲ್ಲಿ ಇರುತ್ತಾರೆ. ಹೀಗೆ ಅವರ ಸಿನಿಮಾ ರಿ-ರಿಲೀಸ್ ಮಾಡಿ ನೋಡ್ತಾ ಇರೋಣ ಎಂದು ಹೇಳಿದರು.
ʼಅಪ್ಪುʼ ಸಿನಿಮಾದಲ್ಲಿ ಪುನೀತ್ಗೆ ರಕ್ಷಿತಾ ನಾಯಕಿಯಾಗಿ ನಟಿಸಿದ್ದು, ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದರು.
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…