ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್ ಅಗಿದ್ದು, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ.
ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, ಈ ಸಿನಿಮಾ ನೋಡಿ ಪುನೀತ್ ಮತ್ತೆ ವಾಪಸ್ ಬಂದು ಬಿಡುತ್ತಾನೋ ಅನ್ನಿಸಿತ್ತು ಎಂದು ಕಣ್ಣೀರಾದರು.
ಅಭಿಮಾನಿಗಳ ಹರುಷ ನೋಡಿದರೆ ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ ಆಗತ್ತದೆ. 23 ವರ್ಷದ ಹಿಂದೆ ಈ ಸಿನಿಮಾ ರಿಲೀಸ್ ಆದಾಗ ತಮ್ಮ ಜೊತೆ ಅಪ್ಪಾಜಿ, ಅಮ್ಮ, ಅಪ್ಪು ಜೊತೆಲಿದ್ದ ಆ ದಿನಗಳು ನೆನಪಾಗುತ್ತವೆ. ಇಷ್ಟು ವರ್ಷಗಳಾದರೂ ಅಪ್ಪು ಸಿನಿಮಾದ ಡೈಲಾಗ್, ಲಿರಿಕ್ಸ್ನನ್ನು ಅಭಿಮಾನಿಗಳು ಮರೆತಿಲ್ಲ. ಎಲ್ಲರೂ ಅಪ್ಪುನ ಸಂಭ್ರಮಿಸಿದರು ಎಂದಿದ್ದಾರೆ.
ಪುನೀತ್ ಈಗ ಇಲ್ಲ. ಅಪ್ಪು ಸಿನಿಮಾ ನೋಡಿ ವಾಪಸ್ ಬಂದು ಬಿಡ್ತನೇನೋ ಅನ್ನಸ್ತು. ಅಪ್ಪು ದೈಹಿಕವಾಗಿ ಇಲ್ಲದಿದ್ದರೂ, ಸಿನಿಮಾ ಮೂಲಕ ನಮ್ಮ ಜೊತೆಯಲ್ಲಿ ಇರುತ್ತಾರೆ. ಹೀಗೆ ಅವರ ಸಿನಿಮಾ ರಿ-ರಿಲೀಸ್ ಮಾಡಿ ನೋಡ್ತಾ ಇರೋಣ ಎಂದು ಹೇಳಿದರು.
ʼಅಪ್ಪುʼ ಸಿನಿಮಾದಲ್ಲಿ ಪುನೀತ್ಗೆ ರಕ್ಷಿತಾ ನಾಯಕಿಯಾಗಿ ನಟಿಸಿದ್ದು, ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದರು.
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…