ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್ ಅಗಿದ್ದು, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ.
ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, ಈ ಸಿನಿಮಾ ನೋಡಿ ಪುನೀತ್ ಮತ್ತೆ ವಾಪಸ್ ಬಂದು ಬಿಡುತ್ತಾನೋ ಅನ್ನಿಸಿತ್ತು ಎಂದು ಕಣ್ಣೀರಾದರು.
ಅಭಿಮಾನಿಗಳ ಹರುಷ ನೋಡಿದರೆ ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ ಆಗತ್ತದೆ. 23 ವರ್ಷದ ಹಿಂದೆ ಈ ಸಿನಿಮಾ ರಿಲೀಸ್ ಆದಾಗ ತಮ್ಮ ಜೊತೆ ಅಪ್ಪಾಜಿ, ಅಮ್ಮ, ಅಪ್ಪು ಜೊತೆಲಿದ್ದ ಆ ದಿನಗಳು ನೆನಪಾಗುತ್ತವೆ. ಇಷ್ಟು ವರ್ಷಗಳಾದರೂ ಅಪ್ಪು ಸಿನಿಮಾದ ಡೈಲಾಗ್, ಲಿರಿಕ್ಸ್ನನ್ನು ಅಭಿಮಾನಿಗಳು ಮರೆತಿಲ್ಲ. ಎಲ್ಲರೂ ಅಪ್ಪುನ ಸಂಭ್ರಮಿಸಿದರು ಎಂದಿದ್ದಾರೆ.
ಪುನೀತ್ ಈಗ ಇಲ್ಲ. ಅಪ್ಪು ಸಿನಿಮಾ ನೋಡಿ ವಾಪಸ್ ಬಂದು ಬಿಡ್ತನೇನೋ ಅನ್ನಸ್ತು. ಅಪ್ಪು ದೈಹಿಕವಾಗಿ ಇಲ್ಲದಿದ್ದರೂ, ಸಿನಿಮಾ ಮೂಲಕ ನಮ್ಮ ಜೊತೆಯಲ್ಲಿ ಇರುತ್ತಾರೆ. ಹೀಗೆ ಅವರ ಸಿನಿಮಾ ರಿ-ರಿಲೀಸ್ ಮಾಡಿ ನೋಡ್ತಾ ಇರೋಣ ಎಂದು ಹೇಳಿದರು.
ʼಅಪ್ಪುʼ ಸಿನಿಮಾದಲ್ಲಿ ಪುನೀತ್ಗೆ ರಕ್ಷಿತಾ ನಾಯಕಿಯಾಗಿ ನಟಿಸಿದ್ದು, ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದರು.
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…
ಡಿ.ವಿ.ರಾಜಶೇಖರ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ…