ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್ ಅಗಿದ್ದು, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸಮೇತ ಸಿನಿಮಾ ನೋಡಿ ಭಾವುಕರಾಗಿದ್ದಾರೆ.
ʼಅಪ್ಪುʼ ಸಿನಿಮಾ ನೋಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಘಣ್ಣ, ಈ ಸಿನಿಮಾ ನೋಡಿ ಪುನೀತ್ ಮತ್ತೆ ವಾಪಸ್ ಬಂದು ಬಿಡುತ್ತಾನೋ ಅನ್ನಿಸಿತ್ತು ಎಂದು ಕಣ್ಣೀರಾದರು.
ಅಭಿಮಾನಿಗಳ ಹರುಷ ನೋಡಿದರೆ ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ ಆಗತ್ತದೆ. 23 ವರ್ಷದ ಹಿಂದೆ ಈ ಸಿನಿಮಾ ರಿಲೀಸ್ ಆದಾಗ ತಮ್ಮ ಜೊತೆ ಅಪ್ಪಾಜಿ, ಅಮ್ಮ, ಅಪ್ಪು ಜೊತೆಲಿದ್ದ ಆ ದಿನಗಳು ನೆನಪಾಗುತ್ತವೆ. ಇಷ್ಟು ವರ್ಷಗಳಾದರೂ ಅಪ್ಪು ಸಿನಿಮಾದ ಡೈಲಾಗ್, ಲಿರಿಕ್ಸ್ನನ್ನು ಅಭಿಮಾನಿಗಳು ಮರೆತಿಲ್ಲ. ಎಲ್ಲರೂ ಅಪ್ಪುನ ಸಂಭ್ರಮಿಸಿದರು ಎಂದಿದ್ದಾರೆ.
ಪುನೀತ್ ಈಗ ಇಲ್ಲ. ಅಪ್ಪು ಸಿನಿಮಾ ನೋಡಿ ವಾಪಸ್ ಬಂದು ಬಿಡ್ತನೇನೋ ಅನ್ನಸ್ತು. ಅಪ್ಪು ದೈಹಿಕವಾಗಿ ಇಲ್ಲದಿದ್ದರೂ, ಸಿನಿಮಾ ಮೂಲಕ ನಮ್ಮ ಜೊತೆಯಲ್ಲಿ ಇರುತ್ತಾರೆ. ಹೀಗೆ ಅವರ ಸಿನಿಮಾ ರಿ-ರಿಲೀಸ್ ಮಾಡಿ ನೋಡ್ತಾ ಇರೋಣ ಎಂದು ಹೇಳಿದರು.
ʼಅಪ್ಪುʼ ಸಿನಿಮಾದಲ್ಲಿ ಪುನೀತ್ಗೆ ರಕ್ಷಿತಾ ನಾಯಕಿಯಾಗಿ ನಟಿಸಿದ್ದು, ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದರು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…