ಮನರಂಜನೆ

ಒಳ್ಳೆತನದಲ್ಲಿ ಅಪ್ಪು ಸರ್‌ ಜೀವಂತ: ನಿರೂಪಕಿ ಅನುಶ್ರೀ

ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್‌ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ.

ನಗರದ ಕಂಠೀರವ ಸ್ಟುಡೀಯೊದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ ಅನುಶ್ರೀ, ನಮ್ರತಾ ಗೌಡ, ಬಿಗ್‌ಬಾಸ್‌ ಸ್ಪರ್ಧಿ ರಂಜಿತ್‌ ಪುನೀತ್‌ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ದಿನದಿಂದ ದಿನಕ್ಕೆ ಅಪ್ಪು ಸರ್‌ಗೆ ಅಭಿಮಾನಿಗಳು ಜಾಸ್ತಿಯಾಗುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ದಿನದಂದು ಸ್ಮಾರಕಕ್ಕೆ ಜಾತ್ರೆ ಹಾಗೇ ಜನ ಸೇರುತ್ತಿದ್ದಾರೆ. ಲಕ್ಷಾಂತರ ಜನ ಅವರ ಹೆಸರನ್ನು ಕೂಗೋ ರೀತಿ ನೋಡಿದ್ರೆ ನಿಜಕ್ಕೂ ಅಪ್ಪು ಸರ್‌ ಇದನ್ನೆಲ್ಲಾ ಕೇಳಿಸಿಕೊಳ್ತಾರೆ ಎಂದಿದ್ದಾರೆ.

ಸುಖದಲ್ಲಿ ತುಂಬಾ ಜನ ನಿಮ್ಮೊಂದಿಗೆ ಬಂದು ನಿಲ್ಲಬಹುದು. ಆದರೆ, ಕಷ್ಟದಲ್ಲಿ ನಿಮ್ಮೊಂದಿಗೆ ನಿಲ್ಲುವವರೇ ನಿಜವಾದ ಹೀರೋ. ನನ್ನೊಂದಿಗೆ ಕಷ್ಟದಲ್ಲಿ ನಿಂತಿದ್ದು ಅಪ್ಪು ಸರ್‌. ಅದನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

 

 

ಆಂದೋಲನ ಡೆಸ್ಕ್

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

12 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago