ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ.
ನಗರದ ಕಂಠೀರವ ಸ್ಟುಡೀಯೊದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ ಅನುಶ್ರೀ, ನಮ್ರತಾ ಗೌಡ, ಬಿಗ್ಬಾಸ್ ಸ್ಪರ್ಧಿ ರಂಜಿತ್ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ದಿನದಿಂದ ದಿನಕ್ಕೆ ಅಪ್ಪು ಸರ್ಗೆ ಅಭಿಮಾನಿಗಳು ಜಾಸ್ತಿಯಾಗುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ದಿನದಂದು ಸ್ಮಾರಕಕ್ಕೆ ಜಾತ್ರೆ ಹಾಗೇ ಜನ ಸೇರುತ್ತಿದ್ದಾರೆ. ಲಕ್ಷಾಂತರ ಜನ ಅವರ ಹೆಸರನ್ನು ಕೂಗೋ ರೀತಿ ನೋಡಿದ್ರೆ ನಿಜಕ್ಕೂ ಅಪ್ಪು ಸರ್ ಇದನ್ನೆಲ್ಲಾ ಕೇಳಿಸಿಕೊಳ್ತಾರೆ ಎಂದಿದ್ದಾರೆ.
ಸುಖದಲ್ಲಿ ತುಂಬಾ ಜನ ನಿಮ್ಮೊಂದಿಗೆ ಬಂದು ನಿಲ್ಲಬಹುದು. ಆದರೆ, ಕಷ್ಟದಲ್ಲಿ ನಿಮ್ಮೊಂದಿಗೆ ನಿಲ್ಲುವವರೇ ನಿಜವಾದ ಹೀರೋ. ನನ್ನೊಂದಿಗೆ ಕಷ್ಟದಲ್ಲಿ ನಿಂತಿದ್ದು ಅಪ್ಪು ಸರ್. ಅದನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…