aradhana rm ( next level cinema )
ಅರವಿಂದ್ ಕೌಶಿಕ್ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
‘ಕಾಟೇರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ, ಈ ಒಂದೂವರೆ ವರ್ಷಗಳಲ್ಲಿ ಯಾವ ಚಿತ್ರವನ್ನೂ ಒಪ್ಪಿಕೊಮಡಿರಲಿಲ್ಲ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದ ಆರಾಧನಾ, ಈಗ ಕನ್ನಡ ಚಿತ್ರರಂಗದ ಮತ್ತೊಬ್ಬ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ವಾಪಸ್ಸಾಗಿದ್ದಾರೆ.
ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ‘ನೆಕ್ಸ್ಟ್ ಲೆವೆಲ್’ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದು, ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿರಲಿದೆಯಂತೆ. ಬೆಂಗಳೂರಿನಲ್ಲಿ ಸದ್ಯದಲ್ಲೇ ‘ನೆಕ್ಸ್ಟ್ ಲೆವೆಲ್’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಚಿತ್ರೀಕರಣ ನಡೆಯಲಿದೆ.
ಸಿನಿಮಾದ ಹೆಚ್ಚಿನ ಭಾಗ ವಿಎಫ್ಎಕ್ಸ್ನಿಂದ ಕೂಡಿರಲಿದ್ದು, ಇದಕ್ಕಾಗಿ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ.
ಉಪೇಂದ್ರ ಮತ್ತು ಆರಾಧನಾ ರಾಮ್ ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ಈ ಹಿಂದೆ, ತರುಣ್್ ಶಿವಪ್ಪ ‘ಛೂ ಮಂತರ್’ ಚಿತ್ರದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಮತ್ತು ಉಳಿದ ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…