ಮನರಂಜನೆ

ʼನೆಕ್ಸ್ಟ್‌ ಲೆವೆಲ್‌ʼಗೆ ಆರಾಧನಾ ರಾಮ್‍; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ಕಾಟೇರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ, ಈ ಒಂದೂವರೆ ವರ್ಷಗಳಲ್ಲಿ ಯಾವ ಚಿತ್ರವನ್ನೂ ಒಪ್ಪಿಕೊಮಡಿರಲಿಲ್ಲ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದ ಆರಾಧನಾ, ಈಗ ಕನ್ನಡ ಚಿತ್ರರಂಗದ ಮತ್ತೊಬ್ಬ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ವಾಪಸ್ಸಾಗಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ‘ನೆಕ್ಸ್ಟ್ ಲೆವೆಲ್’ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದು, ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿರಲಿದೆಯಂತೆ. ಬೆಂಗಳೂರಿನಲ್ಲಿ ಸದ್ಯದಲ್ಲೇ ‘ನೆಕ್ಸ್ಟ್‌ ಲೆವೆಲ್’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಚಿತ್ರೀಕರಣ ನಡೆಯಲಿದೆ.

ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದ್ದು, ಇದಕ್ಕಾಗಿ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ.

ಉಪೇಂದ್ರ ಮತ್ತು ಆರಾಧನಾ ರಾಮ್‍ ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ಈ ಹಿಂದೆ, ತರುಣ್‍್ ಶಿವಪ್ಪ ‘ಛೂ ಮಂತರ್’ ಚಿತ್ರದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಮತ್ತು ಉಳಿದ ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

4 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

4 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

4 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

4 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

4 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

4 hours ago