ಮನರಂಜನೆ

ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾದ ಅರಾಧನಾ ರಾಮ್‍

‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್‍ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ ಒಳ್ಳೆಯ ಕಥೆಗಾಗಿ ಆರಾಧನಾ ಕಾದಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ‘ಕಾಟೇರ’ ನಂತರ ಯಾವೊಂದು ಚಿತ್ರದಲ್ಲೂ ಆರಾಧನಾ ಕಾಣಿಸಿಕೊಂಡಿಲ್ಲ.

ಹೀಗಿರುವಾಗಲೇ ಆರಾಧನಾ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್, ಐಶ್ವರ್ಯ ರೈ, ಸಲ್ಮಾನ್ ಖಾನ್‍, ಹೃತಿಕ್ ರೋಶನ್‍ ಸೇರಿದಂತೆ ಬಾಲಿವುಡ್‍ನ ಜನಪ್ರಿಯ ನಟ-ನಟಿಯರ ಸುಂದರ ಫೋಟೋಗಳನ್ನು ಸೆರೆಹಿಡಿದಿರುವ ಡಬೂ ರತ್ನಾನಿ ಇದೀಗ ಕನ್ನಡದ ಕಲಾವಿದೆಯನ್ನು ತಮ್ಮ ಕ್ಯಾಮರಾ ಮೂಲಕ ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.

ಅಂದಹಾಗೆ, ಆರಾಧನಾ ಇತ್ತೀಚೆಗೆ ‘ದಿ ಜ್ಯುವೆಲರಿ ಶೋ’ಗಾಗಿ ಮಾಡಲ್‍ ಆಗಿದ್ದು, ಈ ಸಂಬಂಧ ಆಭರಣಗಳನ್ನು ತೊಟ್ಟು ಫೋಟೋಶೂಟ್‍ ಮಾಡಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರ ಕ್ಯಾಮರಾಗೆ ಪೋಸ್ ನೀಡಿರುವ ಆರಾಧನಾ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

‘ಕಾಟೇರ’ ನಂತರ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಆರಾಧನಾ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಆ ಜಾಗಕ್ಕೆ ರೀಶ್ಮಾ ನಾಣಯ್ಯ ಬಂದರು. ಆ ನಂತರ ತೆಲುಗಿಗೆ ಮಾಲಾಶ್ರೀ ಮಗಳು ಹೋಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಮಾಲಾಶ್ರೀ ಮಗಳ ಎರಡನೆಯ ಚಿತ್ರ ಇದುವರೆಗೂ ಅಧಿಕೃತವಾಗಿ ‍ಘೋಷಣೆಯಾಗಿಲ್ಲ.

ಭೂಮಿಕಾ

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

42 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago