ಮನರಂಜನೆ

ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾದ ಅರಾಧನಾ ರಾಮ್‍

‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್‍ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ ಒಳ್ಳೆಯ ಕಥೆಗಾಗಿ ಆರಾಧನಾ ಕಾದಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ‘ಕಾಟೇರ’ ನಂತರ ಯಾವೊಂದು ಚಿತ್ರದಲ್ಲೂ ಆರಾಧನಾ ಕಾಣಿಸಿಕೊಂಡಿಲ್ಲ.

ಹೀಗಿರುವಾಗಲೇ ಆರಾಧನಾ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್, ಐಶ್ವರ್ಯ ರೈ, ಸಲ್ಮಾನ್ ಖಾನ್‍, ಹೃತಿಕ್ ರೋಶನ್‍ ಸೇರಿದಂತೆ ಬಾಲಿವುಡ್‍ನ ಜನಪ್ರಿಯ ನಟ-ನಟಿಯರ ಸುಂದರ ಫೋಟೋಗಳನ್ನು ಸೆರೆಹಿಡಿದಿರುವ ಡಬೂ ರತ್ನಾನಿ ಇದೀಗ ಕನ್ನಡದ ಕಲಾವಿದೆಯನ್ನು ತಮ್ಮ ಕ್ಯಾಮರಾ ಮೂಲಕ ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.

ಅಂದಹಾಗೆ, ಆರಾಧನಾ ಇತ್ತೀಚೆಗೆ ‘ದಿ ಜ್ಯುವೆಲರಿ ಶೋ’ಗಾಗಿ ಮಾಡಲ್‍ ಆಗಿದ್ದು, ಈ ಸಂಬಂಧ ಆಭರಣಗಳನ್ನು ತೊಟ್ಟು ಫೋಟೋಶೂಟ್‍ ಮಾಡಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರ ಕ್ಯಾಮರಾಗೆ ಪೋಸ್ ನೀಡಿರುವ ಆರಾಧನಾ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

‘ಕಾಟೇರ’ ನಂತರ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಆರಾಧನಾ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಆ ಜಾಗಕ್ಕೆ ರೀಶ್ಮಾ ನಾಣಯ್ಯ ಬಂದರು. ಆ ನಂತರ ತೆಲುಗಿಗೆ ಮಾಲಾಶ್ರೀ ಮಗಳು ಹೋಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಮಾಲಾಶ್ರೀ ಮಗಳ ಎರಡನೆಯ ಚಿತ್ರ ಇದುವರೆಗೂ ಅಧಿಕೃತವಾಗಿ ‍ಘೋಷಣೆಯಾಗಿಲ್ಲ.

ಭೂಮಿಕಾ

Recent Posts

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

3 mins ago

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

2 hours ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

2 hours ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

2 hours ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

3 hours ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

4 hours ago