‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ ಒಳ್ಳೆಯ ಕಥೆಗಾಗಿ ಆರಾಧನಾ ಕಾದಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ‘ಕಾಟೇರ’ ನಂತರ ಯಾವೊಂದು ಚಿತ್ರದಲ್ಲೂ ಆರಾಧನಾ ಕಾಣಿಸಿಕೊಂಡಿಲ್ಲ.
ಹೀಗಿರುವಾಗಲೇ ಆರಾಧನಾ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್, ಐಶ್ವರ್ಯ ರೈ, ಸಲ್ಮಾನ್ ಖಾನ್, ಹೃತಿಕ್ ರೋಶನ್ ಸೇರಿದಂತೆ ಬಾಲಿವುಡ್ನ ಜನಪ್ರಿಯ ನಟ-ನಟಿಯರ ಸುಂದರ ಫೋಟೋಗಳನ್ನು ಸೆರೆಹಿಡಿದಿರುವ ಡಬೂ ರತ್ನಾನಿ ಇದೀಗ ಕನ್ನಡದ ಕಲಾವಿದೆಯನ್ನು ತಮ್ಮ ಕ್ಯಾಮರಾ ಮೂಲಕ ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.
ಅಂದಹಾಗೆ, ಆರಾಧನಾ ಇತ್ತೀಚೆಗೆ ‘ದಿ ಜ್ಯುವೆಲರಿ ಶೋ’ಗಾಗಿ ಮಾಡಲ್ ಆಗಿದ್ದು, ಈ ಸಂಬಂಧ ಆಭರಣಗಳನ್ನು ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರ ಕ್ಯಾಮರಾಗೆ ಪೋಸ್ ನೀಡಿರುವ ಆರಾಧನಾ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.
‘ಕಾಟೇರ’ ನಂತರ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಆರಾಧನಾ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಆ ಜಾಗಕ್ಕೆ ರೀಶ್ಮಾ ನಾಣಯ್ಯ ಬಂದರು. ಆ ನಂತರ ತೆಲುಗಿಗೆ ಮಾಲಾಶ್ರೀ ಮಗಳು ಹೋಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಮಾಲಾಶ್ರೀ ಮಗಳ ಎರಡನೆಯ ಚಿತ್ರ ಇದುವರೆಗೂ ಅಧಿಕೃತವಾಗಿ ಘೋಷಣೆಯಾಗಿಲ್ಲ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…