‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ ಒಳ್ಳೆಯ ಕಥೆಗಾಗಿ ಆರಾಧನಾ ಕಾದಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ‘ಕಾಟೇರ’ ನಂತರ ಯಾವೊಂದು ಚಿತ್ರದಲ್ಲೂ ಆರಾಧನಾ ಕಾಣಿಸಿಕೊಂಡಿಲ್ಲ.
ಹೀಗಿರುವಾಗಲೇ ಆರಾಧನಾ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್, ಐಶ್ವರ್ಯ ರೈ, ಸಲ್ಮಾನ್ ಖಾನ್, ಹೃತಿಕ್ ರೋಶನ್ ಸೇರಿದಂತೆ ಬಾಲಿವುಡ್ನ ಜನಪ್ರಿಯ ನಟ-ನಟಿಯರ ಸುಂದರ ಫೋಟೋಗಳನ್ನು ಸೆರೆಹಿಡಿದಿರುವ ಡಬೂ ರತ್ನಾನಿ ಇದೀಗ ಕನ್ನಡದ ಕಲಾವಿದೆಯನ್ನು ತಮ್ಮ ಕ್ಯಾಮರಾ ಮೂಲಕ ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.
ಅಂದಹಾಗೆ, ಆರಾಧನಾ ಇತ್ತೀಚೆಗೆ ‘ದಿ ಜ್ಯುವೆಲರಿ ಶೋ’ಗಾಗಿ ಮಾಡಲ್ ಆಗಿದ್ದು, ಈ ಸಂಬಂಧ ಆಭರಣಗಳನ್ನು ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರ ಕ್ಯಾಮರಾಗೆ ಪೋಸ್ ನೀಡಿರುವ ಆರಾಧನಾ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.
‘ಕಾಟೇರ’ ನಂತರ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಆರಾಧನಾ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಆ ಜಾಗಕ್ಕೆ ರೀಶ್ಮಾ ನಾಣಯ್ಯ ಬಂದರು. ಆ ನಂತರ ತೆಲುಗಿಗೆ ಮಾಲಾಶ್ರೀ ಮಗಳು ಹೋಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಮಾಲಾಶ್ರೀ ಮಗಳ ಎರಡನೆಯ ಚಿತ್ರ ಇದುವರೆಗೂ ಅಧಿಕೃತವಾಗಿ ಘೋಷಣೆಯಾಗಿಲ್ಲ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…