‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು ತಿಂಗಳಾದರೂ ಯಾವೊಂದು ಚಿತ್ರದಲ್ಲೂ ಆರಾಧನಾ ಹೆಸರು ಕೇಳಿಬರುತ್ತಿಲ್ಲ. ಅದೇನು ಅವಕಾಶಗಳ ಕೊರತೆಯೋ ಅಥವಾ ಒಳ್ಳೆಯ ಕಥೆಗಾಗಿ ಆರಾಧನಾ ಕಾದಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ‘ಕಾಟೇರ’ ನಂತರ ಯಾವೊಂದು ಚಿತ್ರದಲ್ಲೂ ಆರಾಧನಾ ಕಾಣಿಸಿಕೊಂಡಿಲ್ಲ.
ಹೀಗಿರುವಾಗಲೇ ಆರಾಧನಾ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್, ಐಶ್ವರ್ಯ ರೈ, ಸಲ್ಮಾನ್ ಖಾನ್, ಹೃತಿಕ್ ರೋಶನ್ ಸೇರಿದಂತೆ ಬಾಲಿವುಡ್ನ ಜನಪ್ರಿಯ ನಟ-ನಟಿಯರ ಸುಂದರ ಫೋಟೋಗಳನ್ನು ಸೆರೆಹಿಡಿದಿರುವ ಡಬೂ ರತ್ನಾನಿ ಇದೀಗ ಕನ್ನಡದ ಕಲಾವಿದೆಯನ್ನು ತಮ್ಮ ಕ್ಯಾಮರಾ ಮೂಲಕ ಅದ್ಭುತವಾಗಿ ಸೆರೆ ಹಿಡಿದಿದ್ದಾರೆ.
ಅಂದಹಾಗೆ, ಆರಾಧನಾ ಇತ್ತೀಚೆಗೆ ‘ದಿ ಜ್ಯುವೆಲರಿ ಶೋ’ಗಾಗಿ ಮಾಡಲ್ ಆಗಿದ್ದು, ಈ ಸಂಬಂಧ ಆಭರಣಗಳನ್ನು ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರ ಕ್ಯಾಮರಾಗೆ ಪೋಸ್ ನೀಡಿರುವ ಆರಾಧನಾ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.
‘ಕಾಟೇರ’ ನಂತರ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಆರಾಧನಾ ನಟಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಆ ಜಾಗಕ್ಕೆ ರೀಶ್ಮಾ ನಾಣಯ್ಯ ಬಂದರು. ಆ ನಂತರ ತೆಲುಗಿಗೆ ಮಾಲಾಶ್ರೀ ಮಗಳು ಹೋಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಮಾಲಾಶ್ರೀ ಮಗಳ ಎರಡನೆಯ ಚಿತ್ರ ಇದುವರೆಗೂ ಅಧಿಕೃತವಾಗಿ ಘೋಷಣೆಯಾಗಿಲ್ಲ.
ಗ್ಯಾಂಗ್ಟಕ್: ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್ನಲ್ಲಿ ಮುಂಜಾನೆ ವೇಳೆ ಪ್ರಧಾನಿ…
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ…
ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…
ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…