ಮನರಂಜನೆ

ತಮ್ಮ ಚಿತ್ರದ ಸಮಾರಂಭಕ್ಕೂ ಬರದಷ್ಟು ಅರ್ಜುನ್ ಜನ್ಯ ಬ್ಯುಸಿ

ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅದೆಷ್ಟು ಬ್ಯುಸಿಯಾಗಿರುತ್ತಾರೆ ಎಂದರೆ, ತಮ್ಮದೇ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೂ ಬರುವುದಿಲ್ಲ. ಬಹುಶಃ ‘ಗಾಳಿಪಟ 2’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆ ನಂತರ ಅವರು ತಮ್ಮ ‘45’ ಚಿತ್ರದ ಪತ್ರಿಕಾಗೋಷ್ಠಿಗೆ ಬಂದಿದ್ದರು. ಮಿಕ್ಕಂತೆ ಅರ್ಜುನ್ ಜನ್ಯ ಅವರನ್ನು ಮಾಧ್ಯಮದವರು ನೋಡಿ ಒಂದು ವರ್ಷವಾಗಿದೆ.

ಅರ್ಜುನ್ ಜನ್ಯ ಬಂದು ತಾವೇ ಸಂಗೀತ ಸಂಯೋಜಿಸಿರುವ ಚಿತ್ರಗಳ ಬಗ್ಗೆ ನಾಲ್ಕು ಮಾತಾಡಿದರೆ, ಚಿತ್ರಕ್ಕೆ ಇನ್ನಷ್ಟು ಪ್ರಮೋಷನ್‍ ಆಗಬಹುದು ಎಂಬ ಲೆಕ್ಕಾಚಾರ ಚಿತ್ರತಂಡಗಳದ್ದು. ಆದರೆ, ಅರ್ಜುನ್ ಕೈಯಲ್ಲಿ ಹತ್ತಾರು ಚಿತ್ರಗಳಿವೆ, ಮೇಲೆ ‘45’ ಚಿತ್ರದ ನಿರ್ದೇಶನ ಬೇರೆ. ಅವರದ್ದೇ ಕೆಲಸಗಳ ಒತ್ತಡವಿರುವುದರಿಂದ ಅವರು ಬರುವುದೇ ಇಲ್ಲ. ಅವರನ್ನು ನೋಡಬೇಕೆಂದರೆ, ಜೀ ಟಿವಿಯ ಕಾರ್ಯಕ್ರಮಗಳಲ್ಲೇ ನೋಡಬೇಕು, ಇಲ್ಲ ಅವರ ಸ್ಟುಡಿಯೋಗೆ ಹೋಗಬೇಕು. ಮಿಕ್ಕಂತೆ ಅರ್ಜುನ್‍ ಎಲ್ಲೂ ಬರುವುದಿಲ್ಲ.

ಈಗ್ಯಾಕೆ ಈ ಮಾತು ಎಂದರೆ, ಅರ್ಜುನ್‍ ಜನ್ಯ ಸಂಗೀತ ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿವೆ. ಮೂರೂ ಹಾಡುಗಳನ್ನು ಹಿಟ್ ಆಗಿದೆ ಎಂಬ ಕಾರಣಕ್ಕೆ, ಭಾನುವಾರ ಸಂಜೆ ಆನಂದ್ ಆಡಿಯೋದವರು ಒಂದು ಕಾರ್ಯಕ್ರಮ ಆಯೋಜಿಸಿ ಚಿತ್ರಕ್ಕೆ ಹಾಡಿದ ಗಾಯಕರು ಮತ್ತು ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿದರು. ಹಾಡುಗಳು ಯಶಸ್ವಿಯಾಗುವುದಕ್ಕೆ ಮುಖ್ಯ ಕಾರಣ ಅರ್ಜುನ್‍ ಜನ್ಯ. ಆದರೆ, ಈ ಸಮಾರಂಭಕ್ಕೂ ಅವರು ಗೈರಾಗಿದ್ದರು. ಕಾರಣ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಂತೆ.

ಅವರ ಅನುಪಸ್ಥಿತಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀನಿವಾಸರಾಜು, ‘ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್‍ ಎಂಬುದು ಎಲ್ಲರಿಗೂ ಗೊತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ನಮಗೆ ಸಮಯ ಕೊಟ್ಟು ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದಾರೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಪ್ರೂವ್‍ ಆಗಿದೆ’ ಎಂದು ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಿದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ಗಣೇಶ್, ‘ಚಿತ್ರದ ಹಾಡುಗಳು ಹಿಟ್‍ ಆಗಿವೆ ಅಂತ ಆನಂದ್‍ ಆಡಿಯೋದವರು ಈ ಕಾರ್ಯಕ್ರಮ ಮಾಡುತ್ತಿದ್ದಾರೆ. ಇತ್ತೀಚೆಗೆ, ಆಡಿಯೋ ಹಿಟ್‍ ಆಗುವುದು ಬಹಳ ಕಡಿಮೆ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಈ ಸಮಾರಂಭ ಮಾಡಿದ್ದಾರೆ. ಹಾಡುಗಳು ಯಶಸ್ವಿಯಾಗಿರುವ ಸಂಪೂರ್ಣ ಕ್ರೆಡಿಟ್ ಅರ್ಜುನ್‍ ಜನ್ಯ ಮತ್ತು ನಿರ್ದೇಶಕ ಶ್ರೀನಿವಾಸರಾಜು ಅವರಿಗೆ ಸಲ್ಲಬೇಕು’ ಎಂದರು.

ಭೂಮಿಕಾ

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

6 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

7 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

7 hours ago