ಮನರಂಜನೆ

ತಮ್ಮ ಚಿತ್ರದ ಸಮಾರಂಭಕ್ಕೂ ಬರದಷ್ಟು ಅರ್ಜುನ್ ಜನ್ಯ ಬ್ಯುಸಿ

ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅದೆಷ್ಟು ಬ್ಯುಸಿಯಾಗಿರುತ್ತಾರೆ ಎಂದರೆ, ತಮ್ಮದೇ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೂ ಬರುವುದಿಲ್ಲ. ಬಹುಶಃ ‘ಗಾಳಿಪಟ 2’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆ ನಂತರ ಅವರು ತಮ್ಮ ‘45’ ಚಿತ್ರದ ಪತ್ರಿಕಾಗೋಷ್ಠಿಗೆ ಬಂದಿದ್ದರು. ಮಿಕ್ಕಂತೆ ಅರ್ಜುನ್ ಜನ್ಯ ಅವರನ್ನು ಮಾಧ್ಯಮದವರು ನೋಡಿ ಒಂದು ವರ್ಷವಾಗಿದೆ.

ಅರ್ಜುನ್ ಜನ್ಯ ಬಂದು ತಾವೇ ಸಂಗೀತ ಸಂಯೋಜಿಸಿರುವ ಚಿತ್ರಗಳ ಬಗ್ಗೆ ನಾಲ್ಕು ಮಾತಾಡಿದರೆ, ಚಿತ್ರಕ್ಕೆ ಇನ್ನಷ್ಟು ಪ್ರಮೋಷನ್‍ ಆಗಬಹುದು ಎಂಬ ಲೆಕ್ಕಾಚಾರ ಚಿತ್ರತಂಡಗಳದ್ದು. ಆದರೆ, ಅರ್ಜುನ್ ಕೈಯಲ್ಲಿ ಹತ್ತಾರು ಚಿತ್ರಗಳಿವೆ, ಮೇಲೆ ‘45’ ಚಿತ್ರದ ನಿರ್ದೇಶನ ಬೇರೆ. ಅವರದ್ದೇ ಕೆಲಸಗಳ ಒತ್ತಡವಿರುವುದರಿಂದ ಅವರು ಬರುವುದೇ ಇಲ್ಲ. ಅವರನ್ನು ನೋಡಬೇಕೆಂದರೆ, ಜೀ ಟಿವಿಯ ಕಾರ್ಯಕ್ರಮಗಳಲ್ಲೇ ನೋಡಬೇಕು, ಇಲ್ಲ ಅವರ ಸ್ಟುಡಿಯೋಗೆ ಹೋಗಬೇಕು. ಮಿಕ್ಕಂತೆ ಅರ್ಜುನ್‍ ಎಲ್ಲೂ ಬರುವುದಿಲ್ಲ.

ಈಗ್ಯಾಕೆ ಈ ಮಾತು ಎಂದರೆ, ಅರ್ಜುನ್‍ ಜನ್ಯ ಸಂಗೀತ ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿವೆ. ಮೂರೂ ಹಾಡುಗಳನ್ನು ಹಿಟ್ ಆಗಿದೆ ಎಂಬ ಕಾರಣಕ್ಕೆ, ಭಾನುವಾರ ಸಂಜೆ ಆನಂದ್ ಆಡಿಯೋದವರು ಒಂದು ಕಾರ್ಯಕ್ರಮ ಆಯೋಜಿಸಿ ಚಿತ್ರಕ್ಕೆ ಹಾಡಿದ ಗಾಯಕರು ಮತ್ತು ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿದರು. ಹಾಡುಗಳು ಯಶಸ್ವಿಯಾಗುವುದಕ್ಕೆ ಮುಖ್ಯ ಕಾರಣ ಅರ್ಜುನ್‍ ಜನ್ಯ. ಆದರೆ, ಈ ಸಮಾರಂಭಕ್ಕೂ ಅವರು ಗೈರಾಗಿದ್ದರು. ಕಾರಣ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಂತೆ.

ಅವರ ಅನುಪಸ್ಥಿತಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀನಿವಾಸರಾಜು, ‘ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್‍ ಎಂಬುದು ಎಲ್ಲರಿಗೂ ಗೊತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ನಮಗೆ ಸಮಯ ಕೊಟ್ಟು ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದಾರೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಪ್ರೂವ್‍ ಆಗಿದೆ’ ಎಂದು ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಿದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ಗಣೇಶ್, ‘ಚಿತ್ರದ ಹಾಡುಗಳು ಹಿಟ್‍ ಆಗಿವೆ ಅಂತ ಆನಂದ್‍ ಆಡಿಯೋದವರು ಈ ಕಾರ್ಯಕ್ರಮ ಮಾಡುತ್ತಿದ್ದಾರೆ. ಇತ್ತೀಚೆಗೆ, ಆಡಿಯೋ ಹಿಟ್‍ ಆಗುವುದು ಬಹಳ ಕಡಿಮೆ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಈ ಸಮಾರಂಭ ಮಾಡಿದ್ದಾರೆ. ಹಾಡುಗಳು ಯಶಸ್ವಿಯಾಗಿರುವ ಸಂಪೂರ್ಣ ಕ್ರೆಡಿಟ್ ಅರ್ಜುನ್‍ ಜನ್ಯ ಮತ್ತು ನಿರ್ದೇಶಕ ಶ್ರೀನಿವಾಸರಾಜು ಅವರಿಗೆ ಸಲ್ಲಬೇಕು’ ಎಂದರು.

ಭೂಮಿಕಾ

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago