ಮನರಂಜನೆ

ತಮ್ಮ ಚಿತ್ರದ ಸಮಾರಂಭಕ್ಕೂ ಬರದಷ್ಟು ಅರ್ಜುನ್ ಜನ್ಯ ಬ್ಯುಸಿ

ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅದೆಷ್ಟು ಬ್ಯುಸಿಯಾಗಿರುತ್ತಾರೆ ಎಂದರೆ, ತಮ್ಮದೇ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೂ ಬರುವುದಿಲ್ಲ. ಬಹುಶಃ ‘ಗಾಳಿಪಟ 2’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆ ನಂತರ ಅವರು ತಮ್ಮ ‘45’ ಚಿತ್ರದ ಪತ್ರಿಕಾಗೋಷ್ಠಿಗೆ ಬಂದಿದ್ದರು. ಮಿಕ್ಕಂತೆ ಅರ್ಜುನ್ ಜನ್ಯ ಅವರನ್ನು ಮಾಧ್ಯಮದವರು ನೋಡಿ ಒಂದು ವರ್ಷವಾಗಿದೆ.

ಅರ್ಜುನ್ ಜನ್ಯ ಬಂದು ತಾವೇ ಸಂಗೀತ ಸಂಯೋಜಿಸಿರುವ ಚಿತ್ರಗಳ ಬಗ್ಗೆ ನಾಲ್ಕು ಮಾತಾಡಿದರೆ, ಚಿತ್ರಕ್ಕೆ ಇನ್ನಷ್ಟು ಪ್ರಮೋಷನ್‍ ಆಗಬಹುದು ಎಂಬ ಲೆಕ್ಕಾಚಾರ ಚಿತ್ರತಂಡಗಳದ್ದು. ಆದರೆ, ಅರ್ಜುನ್ ಕೈಯಲ್ಲಿ ಹತ್ತಾರು ಚಿತ್ರಗಳಿವೆ, ಮೇಲೆ ‘45’ ಚಿತ್ರದ ನಿರ್ದೇಶನ ಬೇರೆ. ಅವರದ್ದೇ ಕೆಲಸಗಳ ಒತ್ತಡವಿರುವುದರಿಂದ ಅವರು ಬರುವುದೇ ಇಲ್ಲ. ಅವರನ್ನು ನೋಡಬೇಕೆಂದರೆ, ಜೀ ಟಿವಿಯ ಕಾರ್ಯಕ್ರಮಗಳಲ್ಲೇ ನೋಡಬೇಕು, ಇಲ್ಲ ಅವರ ಸ್ಟುಡಿಯೋಗೆ ಹೋಗಬೇಕು. ಮಿಕ್ಕಂತೆ ಅರ್ಜುನ್‍ ಎಲ್ಲೂ ಬರುವುದಿಲ್ಲ.

ಈಗ್ಯಾಕೆ ಈ ಮಾತು ಎಂದರೆ, ಅರ್ಜುನ್‍ ಜನ್ಯ ಸಂಗೀತ ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿವೆ. ಮೂರೂ ಹಾಡುಗಳನ್ನು ಹಿಟ್ ಆಗಿದೆ ಎಂಬ ಕಾರಣಕ್ಕೆ, ಭಾನುವಾರ ಸಂಜೆ ಆನಂದ್ ಆಡಿಯೋದವರು ಒಂದು ಕಾರ್ಯಕ್ರಮ ಆಯೋಜಿಸಿ ಚಿತ್ರಕ್ಕೆ ಹಾಡಿದ ಗಾಯಕರು ಮತ್ತು ಕಲಾವಿದರಿಗೆ ನೆನಪಿನ ಕಾಣಿಕೆ ನೀಡಿದರು. ಹಾಡುಗಳು ಯಶಸ್ವಿಯಾಗುವುದಕ್ಕೆ ಮುಖ್ಯ ಕಾರಣ ಅರ್ಜುನ್‍ ಜನ್ಯ. ಆದರೆ, ಈ ಸಮಾರಂಭಕ್ಕೂ ಅವರು ಗೈರಾಗಿದ್ದರು. ಕಾರಣ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಂತೆ.

ಅವರ ಅನುಪಸ್ಥಿತಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀನಿವಾಸರಾಜು, ‘ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್‍ ಎಂಬುದು ಎಲ್ಲರಿಗೂ ಗೊತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿಯಾಗಿದ್ದಾರೆ. ಅದರ ನಡುವೆಯೂ ನಮಗೆ ಸಮಯ ಕೊಟ್ಟು ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದಾರೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಪ್ರೂವ್‍ ಆಗಿದೆ’ ಎಂದು ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಿದರು.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ಗಣೇಶ್, ‘ಚಿತ್ರದ ಹಾಡುಗಳು ಹಿಟ್‍ ಆಗಿವೆ ಅಂತ ಆನಂದ್‍ ಆಡಿಯೋದವರು ಈ ಕಾರ್ಯಕ್ರಮ ಮಾಡುತ್ತಿದ್ದಾರೆ. ಇತ್ತೀಚೆಗೆ, ಆಡಿಯೋ ಹಿಟ್‍ ಆಗುವುದು ಬಹಳ ಕಡಿಮೆ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಈ ಸಮಾರಂಭ ಮಾಡಿದ್ದಾರೆ. ಹಾಡುಗಳು ಯಶಸ್ವಿಯಾಗಿರುವ ಸಂಪೂರ್ಣ ಕ್ರೆಡಿಟ್ ಅರ್ಜುನ್‍ ಜನ್ಯ ಮತ್ತು ನಿರ್ದೇಶಕ ಶ್ರೀನಿವಾಸರಾಜು ಅವರಿಗೆ ಸಲ್ಲಬೇಕು’ ಎಂದರು.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago