ಮನರಂಜನೆ

ಕಮಿಷನ್‍ ಆರೋಪ ಸಾಬೀತಾದರೆ ಒಂದು ಕೋಟಿ ಕೊಡ್ತಾರಂತೆ ಅರ್ಜುನ್‍

‘ಮಾರ್ಟಿನ್‍’ ಚಿತ್ರದ ನಿರ್ಮಾಪಕ ಉದಯ್‍ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್‍ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ ಕಮಿಷನ್‍ ಕೊಟ್ಟಿರುವುದಾಗಿ ಹೇಳಿದ್ದು ಸಾಕಷ್ಟು ಸುದ್ದಿಯಾಗಿದೆ.

ಒಂದು ಪಕ್ಷ ‘ಮಾರ್ಟಿನ್‍’ ಚಿತ್ರಕ್ಕೆ ಗ್ರಾಫಿಕ್ಸ್ ಮತ್ತು VFX ಕೆಲಸ ಮಾಡುವವರಿಂದ ಕಮಿಷನ್ ಪಡೆದೆ ಎಂಬ ಆರೋಪ ಸಾಬೀತಾದರೆ ಒಂದು ಕೋಟಿ ರೂ. ನೀಡುವೆ ಎಂದು ನಿರ್ದೇಶಕ ಎ.ಪಿ. ಅರ್ಜುನ್ ಸವಾಲು ಹಾಕಿದ್ದಾರೆ.

ಕಳೆದ ವಾರ ಯಾವಾಗ ಈ ಕಮಿಷನ್‍ ಆರೋಪ ಕೇಳಿಬಂದಿತ್ತೋ, ಆಗಲೇ ನಿರ್ದೇಶಕ ಎ.ಪಿ. ಅರ್ಜುನ್‍ ಪತ್ರಿಕಾಗೋಷ್ಠಿ ಮಾಡಿ, ಈ ಆರೋಪ ಸುಳ್ಳು ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ತಮ್ಮನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಚಿತ್ರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಕಳೆದ 16 ವರ್ಷಗಳಿಂದ ನಾನು ಚಿತ್ರರಂಗದಲ್ಲಿದ್ದೇನೆ. ಬಹಳ ಕಷ್ಟಪಟ್ಟು ನನ್ನ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದೇನೆ. ಲಂಚ ಪಡೆಯುವುದು ನನ್ನ ಸಂಸ್ಕೃತಿಯಲ್ಲ’ ಎಂದರು.

ಅರ್ಜುನ್‍ ದೊಡ್ಡ ಬಿಲ್ಡಿಂಗ್ ಖರೀದಿಸಿದ್ದಾರೆ, ಲಂಚ ಪಡೆದಿದ್ದಾರೆ ಎಂಬ ಆರೋಪಗಳ ಕುರಿತು ಮಾತನಾಡಿರುವ ಅವರು, ‘ನಾನು 20 ಕೋಟಿ ಕೊಟ್ಟು ಒಂದು ಬಿಲ್ಡಿಂಗ್‍ ಖರೀದಿಸಿದೆ ಎಂದು ಸುದ್ದಿ ಮಾಡಿದರು. ಕೆಲವರು ಲಕ್ಷಾಂತರ ಕಮಿಷನ್‍ ಪಡೆದಿದ್ದೇನೆ ಎಂದರು. ನಾನು ಎಲ್ಲಾದರೂ ಐದು ಸಾವಿರ ಕಮಿಷನ್‍ ತಗೊಂಡಿದ್ದೀನಿ ಅಂತ ಯಾರಾದರೂ ಸಾಬೀತು ಮಾಡಿದರೆ ಒಂದು ಕೋಟಿ ರೂ ಕೊಡುತ್ತೇನೆ. ಈ ಪ್ರಕರಣದಲ್ಲಿ ನನ್ನ ಹೆಸರೇ ಇಲ್ಲ. ಯಾರೋ ಉದ್ದೇಶಪೂರ್ವಕವಾಗಿ ನನ್ನ ಹೆಸರು ಎಳೆದು ತರುತ್ತಿದ್ದಾರೆ’ ಎಂದರು.

ಕನ್ನಡ ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆ ಕೊಟ್ಟಿರುವುದಾಗಿ ಹೇಳಿರುವ ಅರ್ಜುನ್‍, ‘ಕಮಿಷನ್‍ ಪಡೆಯುವ ಅವಶ್ಯಕತೆ ನನಗಿಲ್ಲ. ನಾನು ಚಿತ್ರರಂಗಕ್ಕೆ ಬಂದಾಗಿನಿಂದ ಹೊಸಬರ ಜೊತೆಗೆ ಹೆಚ್ಚು ಸಿನಿಮಾ ಮಾಡಿದ್ದೀನಿ. ದರ್ಶನ್‍ ಒಬ್ಬರನ್ನು ಬಿಟ್ಟು ಸ್ಟಾರ್‍ಗಳ ಜೊತೆಗೆ ಕೆಲಸ ಮಾಡಿಲ್ಲ. ಈ ಸಿನಿಮಾಗಳಿಂದ ಚಿತ್ರರಂಗಕ್ಕೆ ಬಹಳಷ್ಟು ಹೊಸ ಕಲಾವಿದರು, ತಂತ್ರಜ್ಞರು ಸಿಕ್ಕಿದ್ದಾರೆ. ಅವರೆಲ್ಲಾ ನನಗೆ ಕಮಿಷನ್‍ ಕೊಟ್ಟಿದ್ದಾರಾ?’ ಎಂದು ಪ್ರಶ್ನಿಸಿದರು.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

2 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

3 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

3 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

4 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

4 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

4 hours ago