ಮನರಂಜನೆ

ಕಮಿಷನ್‍ ಆರೋಪ ಸಾಬೀತಾದರೆ ಒಂದು ಕೋಟಿ ಕೊಡ್ತಾರಂತೆ ಅರ್ಜುನ್‍

‘ಮಾರ್ಟಿನ್‍’ ಚಿತ್ರದ ನಿರ್ಮಾಪಕ ಉದಯ್‍ ಮೆಹ್ತಾ ಅವರಿಗೆ ಡಿಜಿಟಲ್ ಟೆರೇನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಗ್ರಾಫಿಕ್ಸ್ ಸಂಸ್ಥೆಯಿಂದ ಮೋಸವಾಗಿದ್ದು, ಈ ಸಂಬಂಧ ಅವರು ಪೊಲೀಸ್ ಸ್ಟೇಶನ್‍ ಮೆಟ್ಟಿಲೇರಿದ್ದು, ವಿಚಾರಣೆ ವೇಳೆ ಸಂಸ್ಥೆಯ ಸತ್ಯ ರೆಡ್ಡಿ ಎನ್ನುವವರು ನಿರ್ದೇಶಕ ಎ.ಪಿ. ಅರ್ಜುನ್‍ಗೆ ಕಮಿಷನ್‍ ಕೊಟ್ಟಿರುವುದಾಗಿ ಹೇಳಿದ್ದು ಸಾಕಷ್ಟು ಸುದ್ದಿಯಾಗಿದೆ.

ಒಂದು ಪಕ್ಷ ‘ಮಾರ್ಟಿನ್‍’ ಚಿತ್ರಕ್ಕೆ ಗ್ರಾಫಿಕ್ಸ್ ಮತ್ತು VFX ಕೆಲಸ ಮಾಡುವವರಿಂದ ಕಮಿಷನ್ ಪಡೆದೆ ಎಂಬ ಆರೋಪ ಸಾಬೀತಾದರೆ ಒಂದು ಕೋಟಿ ರೂ. ನೀಡುವೆ ಎಂದು ನಿರ್ದೇಶಕ ಎ.ಪಿ. ಅರ್ಜುನ್ ಸವಾಲು ಹಾಕಿದ್ದಾರೆ.

ಕಳೆದ ವಾರ ಯಾವಾಗ ಈ ಕಮಿಷನ್‍ ಆರೋಪ ಕೇಳಿಬಂದಿತ್ತೋ, ಆಗಲೇ ನಿರ್ದೇಶಕ ಎ.ಪಿ. ಅರ್ಜುನ್‍ ಪತ್ರಿಕಾಗೋಷ್ಠಿ ಮಾಡಿ, ಈ ಆರೋಪ ಸುಳ್ಳು ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ತಮ್ಮನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಚಿತ್ರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಕಳೆದ 16 ವರ್ಷಗಳಿಂದ ನಾನು ಚಿತ್ರರಂಗದಲ್ಲಿದ್ದೇನೆ. ಬಹಳ ಕಷ್ಟಪಟ್ಟು ನನ್ನ ವೃತ್ತಿಜೀವನವನ್ನು ರೂಪಿಸಿಕೊಂಡಿದ್ದೇನೆ. ಲಂಚ ಪಡೆಯುವುದು ನನ್ನ ಸಂಸ್ಕೃತಿಯಲ್ಲ’ ಎಂದರು.

ಅರ್ಜುನ್‍ ದೊಡ್ಡ ಬಿಲ್ಡಿಂಗ್ ಖರೀದಿಸಿದ್ದಾರೆ, ಲಂಚ ಪಡೆದಿದ್ದಾರೆ ಎಂಬ ಆರೋಪಗಳ ಕುರಿತು ಮಾತನಾಡಿರುವ ಅವರು, ‘ನಾನು 20 ಕೋಟಿ ಕೊಟ್ಟು ಒಂದು ಬಿಲ್ಡಿಂಗ್‍ ಖರೀದಿಸಿದೆ ಎಂದು ಸುದ್ದಿ ಮಾಡಿದರು. ಕೆಲವರು ಲಕ್ಷಾಂತರ ಕಮಿಷನ್‍ ಪಡೆದಿದ್ದೇನೆ ಎಂದರು. ನಾನು ಎಲ್ಲಾದರೂ ಐದು ಸಾವಿರ ಕಮಿಷನ್‍ ತಗೊಂಡಿದ್ದೀನಿ ಅಂತ ಯಾರಾದರೂ ಸಾಬೀತು ಮಾಡಿದರೆ ಒಂದು ಕೋಟಿ ರೂ ಕೊಡುತ್ತೇನೆ. ಈ ಪ್ರಕರಣದಲ್ಲಿ ನನ್ನ ಹೆಸರೇ ಇಲ್ಲ. ಯಾರೋ ಉದ್ದೇಶಪೂರ್ವಕವಾಗಿ ನನ್ನ ಹೆಸರು ಎಳೆದು ತರುತ್ತಿದ್ದಾರೆ’ ಎಂದರು.

ಕನ್ನಡ ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆ ಕೊಟ್ಟಿರುವುದಾಗಿ ಹೇಳಿರುವ ಅರ್ಜುನ್‍, ‘ಕಮಿಷನ್‍ ಪಡೆಯುವ ಅವಶ್ಯಕತೆ ನನಗಿಲ್ಲ. ನಾನು ಚಿತ್ರರಂಗಕ್ಕೆ ಬಂದಾಗಿನಿಂದ ಹೊಸಬರ ಜೊತೆಗೆ ಹೆಚ್ಚು ಸಿನಿಮಾ ಮಾಡಿದ್ದೀನಿ. ದರ್ಶನ್‍ ಒಬ್ಬರನ್ನು ಬಿಟ್ಟು ಸ್ಟಾರ್‍ಗಳ ಜೊತೆಗೆ ಕೆಲಸ ಮಾಡಿಲ್ಲ. ಈ ಸಿನಿಮಾಗಳಿಂದ ಚಿತ್ರರಂಗಕ್ಕೆ ಬಹಳಷ್ಟು ಹೊಸ ಕಲಾವಿದರು, ತಂತ್ರಜ್ಞರು ಸಿಕ್ಕಿದ್ದಾರೆ. ಅವರೆಲ್ಲಾ ನನಗೆ ಕಮಿಷನ್‍ ಕೊಟ್ಟಿದ್ದಾರಾ?’ ಎಂದು ಪ್ರಶ್ನಿಸಿದರು.

ಭೂಮಿಕಾ

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

7 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

7 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

7 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

7 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

7 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

7 hours ago