seetha payanam
ನಟ-ನಿರ್ದೇಶಕ ಉಪೇಂದ್ರ ಅವರ ಅಭಿಮಾನಿ ಬಳಗ ದೊಡ್ಡದಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗಿನ ಹಲವು ಜನಪ್ರಿಯ ನಿರ್ದೇಶಕರು ತಾವು ಉಪೇಂದ್ರ ಅವರ ಅಭಿಮಾನಿಗಳು ಮತ್ತು ತಾವು ಉಪೇಂದ್ರ ಅವರ ನಿರ್ದೇಶನ ಶೈಲಿಯಿಂದ ಸಾಕಷ್ಟು ಪ್ರಭಾವಗೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈಗ ಆ ಸಾಲಿಗೆ ತೆಲುಗಿನ ಖ್ಯಾತ ನಿರ್ದೇಶಕ ‘ಪುಷ್ಪ’ ಖ್ಯಾತಿಯ ಸುಕುಮಾರ್ ಸಹ ಸೇರಿದ್ದಾರೆ.
ಬುಧವಾರ ಹೈದರಾಬಾದ್ನಲ್ಲಿ ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣಂ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಸಮಾರಂಭಕ್ಕೆ ನಟ ಉಪೇಂದ್ರ ಮತ್ತು ಸುಕುಮಾರ್ ಇಬ್ಬರೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುಕುಮಾರ್, ಉಪೇಂದ್ರ ಕುರಿತು ಮಾತನಾಡಿರುವುದಷ್ಟೇ ಅಲ್ಲ, ಅವರಿಂದ ಹಲವು ವಿಷಯಗಳನ್ನು ಕದ್ದಿರುವುದಾಗಿ ಹೇಳಿಕೊಂಡಿದ್ದಾರೆ.
‘ಇಡೀ ದೇಶದಲ್ಲಿ ಉಪೇಂದ್ರರ ತರಹ ವಿಭಿನ್ನವಾಗಿ ಯೋಚಿಸುವ ಇನ್ನೊಬ್ಬ ನಿರ್ದೇಶಕ ಸಿಗುವುದಿಲ್ಲ. ಒಬ್ಬ ನಿರ್ದೇಶಕ ‘ಎ’, ‘ಓಂ’ ಮತ್ತು ‘ಉಪೇಂದ್ರ’ದಂತಹ ಕಲ್ಟ್ ಸಿನಿಮಾಗಳನ್ನು ನಿರ್ದೇಶಿಸಿದ್ದರೆ, ಅವರು ರಿಟೈರ್ ಆಗಬಹುದಿತ್ತು. ನಾನೇನಾದರೂ ಅಂತಹ ಸಿನಿಮಾಗಳನ್ನು ನಿರ್ದೇಶಿಸಿದ್ದರೆ, ಖಂಡಿತಾ ರಿಟೈರ್ ಆಗುತ್ತಿದ್ದೆ. ಪ್ರತಿಯೊಬ್ಬ ನಿರ್ದೇಶಕರೂ ಅವರಿಂದ ಒಂದಲ್ಲ ಒಂದು ರೀತಿ ಪ್ರೇರಣೆಗೊಂಡಿದ್ದಾರೆ. ಇವತ್ತು ನನ್ನ ಚಿತ್ರಗಳೇನಾದರೂ ವಿಭಿನ್ನವಾಗಿದ್ದರೆ, ಅದಕ್ಕೆ ಉಪೇಂದ್ರರ ಚಿತ್ರಗಳೇ ಪ್ರೇರಣೆ. ನಾನು ಆ ಮೂರು ಚಿತ್ರಗಳಿಂದ ಬಹಳ ಪ್ರಭಾವಗೊಂಡಿದ್ದೇನೆ. ಅಲ್ಲಿಂದ ಸಾಕಷ್ಟು ವಿಷಯಗಳನ್ನು ಕದ್ದಿದ್ದೇನೆ’ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಉಪೇಂದ್ರ, ‘ನಾನೊಬ್ಬನೇ ಅಲ್ಲ, ಬಹಳಷ್ಟು ನಿರ್ದೇಶಕರು ಸುಕುಮಾರ್ ಅವರ ಅಭಿಮಾನಿಗಳು. ಒಂದು ಕಥೆಯನ್ನು ವಿಭಿನ್ನವಾಗಿ ಕಮರ್ಷಿಯಲ್ ಆಗಿ ಹೇಗೆ ಮಾಡಬೇಕು ಎಂದು ತೋರಿಸಿಕೊಟ್ಟವರು ಅವರು’ ಎಂದರು.
‘ಸೀತಾ ಪಯಣಂ’ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕನಾಗಿ ಆಭಿನಯಿಸಿದ್ದು, ಅವರಿಗೆ ನಾಯಕಿಯಾಗಿ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅರ್ಜುನ್ ಸರ್ಜಾ ನಿರ್ಮಿಸಿ-ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…