ಮನರಂಜನೆ

ಅಜಿತ್ ಜೊತೆಗೆ ಅರ್ಜುನ್‍ ಸರ್ಜಾ; ‘ವಿಡಮುಯಾರ್ಚಿ’ಯಲ್ಲಿ ನಟನೆ

ಕನ್ನಡ ಮೂಲದ ಅರ್ಜುನ್‍ ಸರ್ಜಾ ಹಲವು ತೆಲುಗು-ತಮಿಳು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವುದು ಗೊತ್ತೇ ಇದೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳಿಗೆ ಶಿಫ್ಟ್ ಆಗಿದ್ದು, ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವಿಜಯ್ ಅಭಿನಯದ ‘ಲಿಯೋ’ ಎಂಬ ತಮಿಳು ಚಿತ್ರದಲ್ಲಿ ಅವರು ವಿಲನ್‍ ಪಾತ್ರದಲ್ಲೂ ಕಾಣಿಸಿಕೊಂಡಿದ್ದರು.

ಈಗ ಅರ್ಜುನ್‍ ಸರ್ಜಾ ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ‘ತಲಾ’ ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಸದ್ಯಕ್ಕೆ ತಮಿಳಿನ ಬಹುನಿರೀಕ್ಷಿತ ಚಿತ್ರ. ಇದೀಗ ಈ ಚಿತ್ರದಲ್ಲಿ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೋಮವಾರ ಬೆಳಿಗ್ಗೆ ಅವರ ಮೊದಲ ನೋಟ ಬಿಡುಗಡೆಯಾಗಿದೆ.

ಬಿಡುಗಡೆಯಾಗಿರುವ ಪೋಸ್ವರ್‍ನಲ್ಲಿ ‘ಆ್ಯಕ್ಷನ್ ಕಿಂಗ್’ ಅರ್ಜುನ್‍ ಸರ್ಜಾ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ನೆರಳು ಕಾಣುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಈ ಚಿತ್ರಕ್ಕಿದ್ದು, ಚಿತ್ರದ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಅಜಿತ್‍ ಮತ್ತು ಅರ್ಜುನ್‍ ಸರ್ಜಾ ಜೊತೆಯಾಗಿ ನಟಿಸುತ್ತಿರುವುದು ಇದು ಮೊದಲೇನಲ್ಲ. ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಚಿತ್ರದಲ್ಲಿ ಅಜಿತ್‍ ಮತ್ತು ಅರ್ಜುನ್ ನಟಿಸಿದ್ದರು. ಜೊತೆಗೆ ತ್ರಿಷಾ ಸಹ ಆ ಚಿತ್ರದಲ್ಲಿ ನಟಿಸಿದ್ದರು. ಈಗ ಮೂವರೂ ಈ ಚಿತ್ರದಲ್ಲಿ ರಿಪೀಟ್‍ ಆಗುತ್ತಿರುವುದು ವಿಶೇಷ.

ಬಹಳ ರಿಸ್ಕ್ ಇರುವ ಸ್ಟಂಟ್‍ಗಳಿರುವ ಈ ಚಿತ್ರದಲ್ಲಿ ಅಜಿತ್‍, ತ್ರಿಷಾ ಮತ್ತು ಅರ್ಜುನ್‍ ಜೊತೆಗೆ ಆರವ್, ರೆಜಿನಾ ಕಸಾಂದ್ರ, ನಿಖಿಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಬಹಳ ದೊಡ್ಡ ಮೊತ್ತಕ್ಕೆ ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವು ಅಕ್ಟೋಬರ್ 31 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಭೂಮಿಕಾ

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

2 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

2 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

2 hours ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

2 hours ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

2 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

2 hours ago