ಮನರಂಜನೆ

ಅಜಿತ್ ಜೊತೆಗೆ ಅರ್ಜುನ್‍ ಸರ್ಜಾ; ‘ವಿಡಮುಯಾರ್ಚಿ’ಯಲ್ಲಿ ನಟನೆ

ಕನ್ನಡ ಮೂಲದ ಅರ್ಜುನ್‍ ಸರ್ಜಾ ಹಲವು ತೆಲುಗು-ತಮಿಳು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವುದು ಗೊತ್ತೇ ಇದೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳಿಗೆ ಶಿಫ್ಟ್ ಆಗಿದ್ದು, ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವಿಜಯ್ ಅಭಿನಯದ ‘ಲಿಯೋ’ ಎಂಬ ತಮಿಳು ಚಿತ್ರದಲ್ಲಿ ಅವರು ವಿಲನ್‍ ಪಾತ್ರದಲ್ಲೂ ಕಾಣಿಸಿಕೊಂಡಿದ್ದರು.

ಈಗ ಅರ್ಜುನ್‍ ಸರ್ಜಾ ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ‘ತಲಾ’ ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಸದ್ಯಕ್ಕೆ ತಮಿಳಿನ ಬಹುನಿರೀಕ್ಷಿತ ಚಿತ್ರ. ಇದೀಗ ಈ ಚಿತ್ರದಲ್ಲಿ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೋಮವಾರ ಬೆಳಿಗ್ಗೆ ಅವರ ಮೊದಲ ನೋಟ ಬಿಡುಗಡೆಯಾಗಿದೆ.

ಬಿಡುಗಡೆಯಾಗಿರುವ ಪೋಸ್ವರ್‍ನಲ್ಲಿ ‘ಆ್ಯಕ್ಷನ್ ಕಿಂಗ್’ ಅರ್ಜುನ್‍ ಸರ್ಜಾ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ನೆರಳು ಕಾಣುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಈ ಚಿತ್ರಕ್ಕಿದ್ದು, ಚಿತ್ರದ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಅಜಿತ್‍ ಮತ್ತು ಅರ್ಜುನ್‍ ಸರ್ಜಾ ಜೊತೆಯಾಗಿ ನಟಿಸುತ್ತಿರುವುದು ಇದು ಮೊದಲೇನಲ್ಲ. ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಚಿತ್ರದಲ್ಲಿ ಅಜಿತ್‍ ಮತ್ತು ಅರ್ಜುನ್ ನಟಿಸಿದ್ದರು. ಜೊತೆಗೆ ತ್ರಿಷಾ ಸಹ ಆ ಚಿತ್ರದಲ್ಲಿ ನಟಿಸಿದ್ದರು. ಈಗ ಮೂವರೂ ಈ ಚಿತ್ರದಲ್ಲಿ ರಿಪೀಟ್‍ ಆಗುತ್ತಿರುವುದು ವಿಶೇಷ.

ಬಹಳ ರಿಸ್ಕ್ ಇರುವ ಸ್ಟಂಟ್‍ಗಳಿರುವ ಈ ಚಿತ್ರದಲ್ಲಿ ಅಜಿತ್‍, ತ್ರಿಷಾ ಮತ್ತು ಅರ್ಜುನ್‍ ಜೊತೆಗೆ ಆರವ್, ರೆಜಿನಾ ಕಸಾಂದ್ರ, ನಿಖಿಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಬಹಳ ದೊಡ್ಡ ಮೊತ್ತಕ್ಕೆ ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವು ಅಕ್ಟೋಬರ್ 31 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಭೂಮಿಕಾ

Recent Posts

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

40 seconds ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

3 mins ago

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

4 mins ago

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

32 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

38 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

2 hours ago