ಮನರಂಜನೆ

ಅಜಿತ್ ಜೊತೆಗೆ ಅರ್ಜುನ್‍ ಸರ್ಜಾ; ‘ವಿಡಮುಯಾರ್ಚಿ’ಯಲ್ಲಿ ನಟನೆ

ಕನ್ನಡ ಮೂಲದ ಅರ್ಜುನ್‍ ಸರ್ಜಾ ಹಲವು ತೆಲುಗು-ತಮಿಳು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವುದು ಗೊತ್ತೇ ಇದೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳಿಗೆ ಶಿಫ್ಟ್ ಆಗಿದ್ದು, ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವಿಜಯ್ ಅಭಿನಯದ ‘ಲಿಯೋ’ ಎಂಬ ತಮಿಳು ಚಿತ್ರದಲ್ಲಿ ಅವರು ವಿಲನ್‍ ಪಾತ್ರದಲ್ಲೂ ಕಾಣಿಸಿಕೊಂಡಿದ್ದರು.

ಈಗ ಅರ್ಜುನ್‍ ಸರ್ಜಾ ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ‘ತಲಾ’ ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಸದ್ಯಕ್ಕೆ ತಮಿಳಿನ ಬಹುನಿರೀಕ್ಷಿತ ಚಿತ್ರ. ಇದೀಗ ಈ ಚಿತ್ರದಲ್ಲಿ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೋಮವಾರ ಬೆಳಿಗ್ಗೆ ಅವರ ಮೊದಲ ನೋಟ ಬಿಡುಗಡೆಯಾಗಿದೆ.

ಬಿಡುಗಡೆಯಾಗಿರುವ ಪೋಸ್ವರ್‍ನಲ್ಲಿ ‘ಆ್ಯಕ್ಷನ್ ಕಿಂಗ್’ ಅರ್ಜುನ್‍ ಸರ್ಜಾ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ನೆರಳು ಕಾಣುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಈ ಚಿತ್ರಕ್ಕಿದ್ದು, ಚಿತ್ರದ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.

ಅಜಿತ್‍ ಮತ್ತು ಅರ್ಜುನ್‍ ಸರ್ಜಾ ಜೊತೆಯಾಗಿ ನಟಿಸುತ್ತಿರುವುದು ಇದು ಮೊದಲೇನಲ್ಲ. ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಚಿತ್ರದಲ್ಲಿ ಅಜಿತ್‍ ಮತ್ತು ಅರ್ಜುನ್ ನಟಿಸಿದ್ದರು. ಜೊತೆಗೆ ತ್ರಿಷಾ ಸಹ ಆ ಚಿತ್ರದಲ್ಲಿ ನಟಿಸಿದ್ದರು. ಈಗ ಮೂವರೂ ಈ ಚಿತ್ರದಲ್ಲಿ ರಿಪೀಟ್‍ ಆಗುತ್ತಿರುವುದು ವಿಶೇಷ.

ಬಹಳ ರಿಸ್ಕ್ ಇರುವ ಸ್ಟಂಟ್‍ಗಳಿರುವ ಈ ಚಿತ್ರದಲ್ಲಿ ಅಜಿತ್‍, ತ್ರಿಷಾ ಮತ್ತು ಅರ್ಜುನ್‍ ಜೊತೆಗೆ ಆರವ್, ರೆಜಿನಾ ಕಸಾಂದ್ರ, ನಿಖಿಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.

‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಬಹಳ ದೊಡ್ಡ ಮೊತ್ತಕ್ಕೆ ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವು ಅಕ್ಟೋಬರ್ 31 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಭೂಮಿಕಾ

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

2 mins ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

13 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

15 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

18 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

22 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago