ಮನರಂಜನೆ

ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಅನುರಾಗ್‌ ಕಶ್ಯಪ್‌

ದಕ್ಷಿಣ ಸಿನಿರಂಗದತ್ತ ಬಾಲಿವುಡ್‌ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಸೇರ್ಪಡೆಯಾಗಿದ್ದಾರೆ.

ಅನುರಾಗ್‌ ಕಶ್ಯಪ್‌ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್‌ʼ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಅವರು, ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಹಾಸ್ಯ ನಟ-ನಿರ್ದೇಶಕ ಸಂಜಯ್‌ ಶಾಸ್ತ್ರಿ ನಿರ್ದೇಶನ ಮಾಡುತ್ತಿರುವ ಕನ್ನಡದ ‘8’ ಸಿನಿಮಾದಲ್ಲಿ ಅನುರಾಗ್‌ ಕಶ್ಯಪ್‌ ನಟಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ‘8’ ಸಿನಿಮಾದ ಟೈಟಲ್‌ ಲಾಂಚ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಇದೊಂದು ಎಮೋಷನಲ್‌ ಕಥೆಯಾಗಿದ್ದು, ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ಅರವಿಂದ್‌ ಹಾಗೂ ಸಂಜಯ್‌ ಅವರಿಗೆ ಧನ್ಯವಾದ ಎಂದರು.

ಫುಟ್‌ಬಾಲ್‌ ಆಟದ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ. ಎವಿಆರ್‌ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾದ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ಅರವಿಂದ್‌ ವೆಂಕಟೇಶ್‌ ರೆಡ್ಡಿ ಹಣ ಹೂಡುತ್ತಿದ್ದು, ನಾಯಕ ನಟನಾಗಿ ಬಿಗ್‌ಬಾಸ್‌ ಖ್ಯಾತಿಯ ಮಹೇಶ್‌ ಕಾರ್ತಿಕ್‌ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

9 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

10 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

10 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

10 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

10 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

10 hours ago