ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸೇರ್ಪಡೆಯಾಗಿದ್ದಾರೆ.
ಅನುರಾಗ್ ಕಶ್ಯಪ್ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್ʼ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಅವರು, ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಹಾಸ್ಯ ನಟ-ನಿರ್ದೇಶಕ ಸಂಜಯ್ ಶಾಸ್ತ್ರಿ ನಿರ್ದೇಶನ ಮಾಡುತ್ತಿರುವ ಕನ್ನಡದ ‘8’ ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆದ ‘8’ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಇದೊಂದು ಎಮೋಷನಲ್ ಕಥೆಯಾಗಿದ್ದು, ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ಅರವಿಂದ್ ಹಾಗೂ ಸಂಜಯ್ ಅವರಿಗೆ ಧನ್ಯವಾದ ಎಂದರು.
ಫುಟ್ಬಾಲ್ ಆಟದ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ. ಎವಿಆರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾದ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ಅರವಿಂದ್ ವೆಂಕಟೇಶ್ ರೆಡ್ಡಿ ಹಣ ಹೂಡುತ್ತಿದ್ದು, ನಾಯಕ ನಟನಾಗಿ ಬಿಗ್ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಟಿಸುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…