ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸೇರ್ಪಡೆಯಾಗಿದ್ದಾರೆ.
ಅನುರಾಗ್ ಕಶ್ಯಪ್ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್ʼ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಅವರು, ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಹಾಸ್ಯ ನಟ-ನಿರ್ದೇಶಕ ಸಂಜಯ್ ಶಾಸ್ತ್ರಿ ನಿರ್ದೇಶನ ಮಾಡುತ್ತಿರುವ ಕನ್ನಡದ ‘8’ ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆದ ‘8’ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಇದೊಂದು ಎಮೋಷನಲ್ ಕಥೆಯಾಗಿದ್ದು, ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ಅರವಿಂದ್ ಹಾಗೂ ಸಂಜಯ್ ಅವರಿಗೆ ಧನ್ಯವಾದ ಎಂದರು.
ಫುಟ್ಬಾಲ್ ಆಟದ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ. ಎವಿಆರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾದ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ಅರವಿಂದ್ ವೆಂಕಟೇಶ್ ರೆಡ್ಡಿ ಹಣ ಹೂಡುತ್ತಿದ್ದು, ನಾಯಕ ನಟನಾಗಿ ಬಿಗ್ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಟಿಸುತ್ತಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…