ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್ವುಡ್, ಟಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸೇರ್ಪಡೆಯಾಗಿದ್ದಾರೆ.
ಅನುರಾಗ್ ಕಶ್ಯಪ್ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್ʼ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಅವರು, ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಹಾಸ್ಯ ನಟ-ನಿರ್ದೇಶಕ ಸಂಜಯ್ ಶಾಸ್ತ್ರಿ ನಿರ್ದೇಶನ ಮಾಡುತ್ತಿರುವ ಕನ್ನಡದ ‘8’ ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆದ ‘8’ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಇದೊಂದು ಎಮೋಷನಲ್ ಕಥೆಯಾಗಿದ್ದು, ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ಅರವಿಂದ್ ಹಾಗೂ ಸಂಜಯ್ ಅವರಿಗೆ ಧನ್ಯವಾದ ಎಂದರು.
ಫುಟ್ಬಾಲ್ ಆಟದ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ. ಎವಿಆರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾದ ನಿರ್ಮಾಣ ಆಗುತ್ತಿದೆ. ಈ ಚಿತ್ರಕ್ಕೆ ಅರವಿಂದ್ ವೆಂಕಟೇಶ್ ರೆಡ್ಡಿ ಹಣ ಹೂಡುತ್ತಿದ್ದು, ನಾಯಕ ನಟನಾಗಿ ಬಿಗ್ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಟಿಸುತ್ತಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…