ಮನರಂಜನೆ

ಕಾರ್ತಿಗೆ ನಾಯಕಿಯಾದ ಆಶಿಕಾ ರಂಗನಾಥ್‍; ‘ಸರ್ದಾರ್ 2’ ಚಿತ್ರದಲ್ಲಿ ನಟನೆ

ರಶ್ಮಿಕಾ ಮಂದಣ್ಣ, ನಭಾ ನಟೇಶ್‍, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್‍. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ ಪಟ್ಟಿಯಲ್ಲಿ ಇನ್ನೊಂದು ಪರಭಾಷಾ ಚಿತ್ರವು ಸೇರಿಕೊಂಡಿದೆ.

ತಮಿಳು ನಟ ಕಾರ್ತಿ ಅಭಿನಯದ ‘ಸರ್ದಾರ್ 2’ ಚಿತ್ರಕ್ಕೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಅವರೇ ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಆಶಿಕಾ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಅವರನ್ನು ಚಿತ್ರಕ್ಕೆ ಅಧಿಕೃತವಾಗಿ ಬರಮಾಡಿಕೊಂಡಿದ್ದಾರೆ. ಆಶಿಕಾ ಸಹ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಒಂದು ಭಾಗ ಮಾಡಿಕೊಂಡಿದ್ದಿಕ್ಕೆ ಚಿತ್ರತಂಡದವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅಂದಹಾಗೆ, ‘ಸರ್ದಾರ್‍ 2’ ಚಿತ್ರವನ್ನು ಪ್ರಿನ್ಸ್ ಪಿಕ್ಚರ್ಸ್ ಸಂಸ್ಥೆಯವರು ನಿರ್ಮಿಸುತ್ತಿದ್ದು, ಕಾರ್ತಿಗೆ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ. ಈ ಪೈಕಿ ಆಶಿಕಾ ಒಬ್ಬರಾದರೆ, ಮಾಳವಿಕಾ ಮೋಹನನ್ ಇನ್ನೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯುವನ್‍ ಶಂಕರ್‍ ರಾಜ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಆಶಿಕಾಗೆ ತಮಿಳು ಚಿತ್ರರಂಗ ಹೊಸದೇನಲ್ಲ. ಇದು ಅವರ ಮೂರನೆಯ ಚಿತ್ರ. ಅಥರ್ವ ಅಭಿನಯದ ‘ಪಟ್ಟತ್ತು ಅರಸನ್‍’ ಚಿತ್ರದ ಮೂಲಕ ತಮಿಳಿಗೆ ಹೋದ ಆಶಿಕಾ, ಆ ನಂತರ ‘ಮಿಸ್ ಯೂ’ ಎಂಬ ಇನ್ನೊಂದು ಚಿತ್ರದಲ್ಲೂ ನಟಿಸಿದ್ದಾರೆ. ಈಗ ಕಾರ್ತಿಯಂತಹ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಲ್ಲದೆ, ತೆಲುಗಿನಲ್ಲಿ ಒಂದು ದೊಡ್ಡ ಚಿತ್ರಕ್ಕೂ ಆಶಿಕಾ ಸೇರ್ಪಡೆಯಾಗಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಬರಾ’ ಎಂಬ ಚಿತ್ರದಲ್ಲಿ ಆಶಿಕಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಅಂದಹಾಗೆ, ‘ಅವತಾರ ಪುರುಷ 2’ ಚಿತ್ರದ ನಂತರ ಆಶಿಕಾ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಅದೂ ಸಹ ನಾಲ್ಕು ವರ್ಷಗಳ ಹಿಂದೆಯೇ ಒಪ್ಪಿಕೊಂಡ ಚಿತ್ರವಾಗಿತ್ತು. ಕನ್ನಡದಿಂದ ಸೂಕ್ತ ಅವಕಾಶಗಳು ಸಿಗುತ್ತಿಲ್ಲವೋ ಅಥವಾ ಪರಭಾಷಾ ಚಿತ್ರಗಳಿಂದ ಪುರುಸೊತ್ತು ಸಿಗುತ್ತಿಲ್ಲವೋ ಗೊತ್ತಿಲ್ಲ. ಒಟ್ಟಿನಲ್ಲಿ ಆಶಿಕಾ ರಂಗನಾಥ್‍ ಇತ್ತೀಚೆಗೆ ಯಾವುದೇ ಕನ್ನಡ ಚಿತ್ರವನ್ನೂ ಒಪ್ಪಿಲ್ಲ.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

6 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

7 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

7 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

8 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

8 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago