ಮನರಂಜನೆ

ಕಾರ್ತಿಗೆ ನಾಯಕಿಯಾದ ಆಶಿಕಾ ರಂಗನಾಥ್‍; ‘ಸರ್ದಾರ್ 2’ ಚಿತ್ರದಲ್ಲಿ ನಟನೆ

ರಶ್ಮಿಕಾ ಮಂದಣ್ಣ, ನಭಾ ನಟೇಶ್‍, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್‍. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ ಪಟ್ಟಿಯಲ್ಲಿ ಇನ್ನೊಂದು ಪರಭಾಷಾ ಚಿತ್ರವು ಸೇರಿಕೊಂಡಿದೆ.

ತಮಿಳು ನಟ ಕಾರ್ತಿ ಅಭಿನಯದ ‘ಸರ್ದಾರ್ 2’ ಚಿತ್ರಕ್ಕೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಅವರೇ ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಆಶಿಕಾ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಅವರನ್ನು ಚಿತ್ರಕ್ಕೆ ಅಧಿಕೃತವಾಗಿ ಬರಮಾಡಿಕೊಂಡಿದ್ದಾರೆ. ಆಶಿಕಾ ಸಹ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಒಂದು ಭಾಗ ಮಾಡಿಕೊಂಡಿದ್ದಿಕ್ಕೆ ಚಿತ್ರತಂಡದವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅಂದಹಾಗೆ, ‘ಸರ್ದಾರ್‍ 2’ ಚಿತ್ರವನ್ನು ಪ್ರಿನ್ಸ್ ಪಿಕ್ಚರ್ಸ್ ಸಂಸ್ಥೆಯವರು ನಿರ್ಮಿಸುತ್ತಿದ್ದು, ಕಾರ್ತಿಗೆ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ. ಈ ಪೈಕಿ ಆಶಿಕಾ ಒಬ್ಬರಾದರೆ, ಮಾಳವಿಕಾ ಮೋಹನನ್ ಇನ್ನೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯುವನ್‍ ಶಂಕರ್‍ ರಾಜ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಆಶಿಕಾಗೆ ತಮಿಳು ಚಿತ್ರರಂಗ ಹೊಸದೇನಲ್ಲ. ಇದು ಅವರ ಮೂರನೆಯ ಚಿತ್ರ. ಅಥರ್ವ ಅಭಿನಯದ ‘ಪಟ್ಟತ್ತು ಅರಸನ್‍’ ಚಿತ್ರದ ಮೂಲಕ ತಮಿಳಿಗೆ ಹೋದ ಆಶಿಕಾ, ಆ ನಂತರ ‘ಮಿಸ್ ಯೂ’ ಎಂಬ ಇನ್ನೊಂದು ಚಿತ್ರದಲ್ಲೂ ನಟಿಸಿದ್ದಾರೆ. ಈಗ ಕಾರ್ತಿಯಂತಹ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಲ್ಲದೆ, ತೆಲುಗಿನಲ್ಲಿ ಒಂದು ದೊಡ್ಡ ಚಿತ್ರಕ್ಕೂ ಆಶಿಕಾ ಸೇರ್ಪಡೆಯಾಗಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಬರಾ’ ಎಂಬ ಚಿತ್ರದಲ್ಲಿ ಆಶಿಕಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಅಂದಹಾಗೆ, ‘ಅವತಾರ ಪುರುಷ 2’ ಚಿತ್ರದ ನಂತರ ಆಶಿಕಾ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಅದೂ ಸಹ ನಾಲ್ಕು ವರ್ಷಗಳ ಹಿಂದೆಯೇ ಒಪ್ಪಿಕೊಂಡ ಚಿತ್ರವಾಗಿತ್ತು. ಕನ್ನಡದಿಂದ ಸೂಕ್ತ ಅವಕಾಶಗಳು ಸಿಗುತ್ತಿಲ್ಲವೋ ಅಥವಾ ಪರಭಾಷಾ ಚಿತ್ರಗಳಿಂದ ಪುರುಸೊತ್ತು ಸಿಗುತ್ತಿಲ್ಲವೋ ಗೊತ್ತಿಲ್ಲ. ಒಟ್ಟಿನಲ್ಲಿ ಆಶಿಕಾ ರಂಗನಾಥ್‍ ಇತ್ತೀಚೆಗೆ ಯಾವುದೇ ಕನ್ನಡ ಚಿತ್ರವನ್ನೂ ಒಪ್ಪಿಲ್ಲ.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

6 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

6 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

6 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

6 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

7 hours ago