ಮನರಂಜನೆ

ಕಾರ್ತಿಗೆ ನಾಯಕಿಯಾದ ಆಶಿಕಾ ರಂಗನಾಥ್‍; ‘ಸರ್ದಾರ್ 2’ ಚಿತ್ರದಲ್ಲಿ ನಟನೆ

ರಶ್ಮಿಕಾ ಮಂದಣ್ಣ, ನಭಾ ನಟೇಶ್‍, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್‍. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ ಪಟ್ಟಿಯಲ್ಲಿ ಇನ್ನೊಂದು ಪರಭಾಷಾ ಚಿತ್ರವು ಸೇರಿಕೊಂಡಿದೆ.

ತಮಿಳು ನಟ ಕಾರ್ತಿ ಅಭಿನಯದ ‘ಸರ್ದಾರ್ 2’ ಚಿತ್ರಕ್ಕೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಅವರೇ ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಆಶಿಕಾ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಅವರನ್ನು ಚಿತ್ರಕ್ಕೆ ಅಧಿಕೃತವಾಗಿ ಬರಮಾಡಿಕೊಂಡಿದ್ದಾರೆ. ಆಶಿಕಾ ಸಹ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಒಂದು ಭಾಗ ಮಾಡಿಕೊಂಡಿದ್ದಿಕ್ಕೆ ಚಿತ್ರತಂಡದವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅಂದಹಾಗೆ, ‘ಸರ್ದಾರ್‍ 2’ ಚಿತ್ರವನ್ನು ಪ್ರಿನ್ಸ್ ಪಿಕ್ಚರ್ಸ್ ಸಂಸ್ಥೆಯವರು ನಿರ್ಮಿಸುತ್ತಿದ್ದು, ಕಾರ್ತಿಗೆ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ. ಈ ಪೈಕಿ ಆಶಿಕಾ ಒಬ್ಬರಾದರೆ, ಮಾಳವಿಕಾ ಮೋಹನನ್ ಇನ್ನೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯುವನ್‍ ಶಂಕರ್‍ ರಾಜ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಆಶಿಕಾಗೆ ತಮಿಳು ಚಿತ್ರರಂಗ ಹೊಸದೇನಲ್ಲ. ಇದು ಅವರ ಮೂರನೆಯ ಚಿತ್ರ. ಅಥರ್ವ ಅಭಿನಯದ ‘ಪಟ್ಟತ್ತು ಅರಸನ್‍’ ಚಿತ್ರದ ಮೂಲಕ ತಮಿಳಿಗೆ ಹೋದ ಆಶಿಕಾ, ಆ ನಂತರ ‘ಮಿಸ್ ಯೂ’ ಎಂಬ ಇನ್ನೊಂದು ಚಿತ್ರದಲ್ಲೂ ನಟಿಸಿದ್ದಾರೆ. ಈಗ ಕಾರ್ತಿಯಂತಹ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಲ್ಲದೆ, ತೆಲುಗಿನಲ್ಲಿ ಒಂದು ದೊಡ್ಡ ಚಿತ್ರಕ್ಕೂ ಆಶಿಕಾ ಸೇರ್ಪಡೆಯಾಗಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಬರಾ’ ಎಂಬ ಚಿತ್ರದಲ್ಲಿ ಆಶಿಕಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರವು ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಅಂದಹಾಗೆ, ‘ಅವತಾರ ಪುರುಷ 2’ ಚಿತ್ರದ ನಂತರ ಆಶಿಕಾ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಅದೂ ಸಹ ನಾಲ್ಕು ವರ್ಷಗಳ ಹಿಂದೆಯೇ ಒಪ್ಪಿಕೊಂಡ ಚಿತ್ರವಾಗಿತ್ತು. ಕನ್ನಡದಿಂದ ಸೂಕ್ತ ಅವಕಾಶಗಳು ಸಿಗುತ್ತಿಲ್ಲವೋ ಅಥವಾ ಪರಭಾಷಾ ಚಿತ್ರಗಳಿಂದ ಪುರುಸೊತ್ತು ಸಿಗುತ್ತಿಲ್ಲವೋ ಗೊತ್ತಿಲ್ಲ. ಒಟ್ಟಿನಲ್ಲಿ ಆಶಿಕಾ ರಂಗನಾಥ್‍ ಇತ್ತೀಚೆಗೆ ಯಾವುದೇ ಕನ್ನಡ ಚಿತ್ರವನ್ನೂ ಒಪ್ಪಿಲ್ಲ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago