ಮನರಂಜನೆ

‘ಅಳಿದು ಉಳಿದವರು’ ನಂತರ ಅಶು ಬೆದ್ರ ಇನ್ನೊಂದು ಸಿನಿಮಾ…

‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್‍ ಅಭಿಯದ ‘ಹೆಡ್‍ ಬುಷ್‍’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್‍ ಅವರೇ ವಹಿಸಿಕೊಂಡರು. ಆ ನಂತರ ಅಶು ಬೆದ್ರ ಸುದ್ದಿಯೇ ಇರಲಿಲ್ಲ. ಈಗ ಬಹಳ ದಿನಗಳ ನಂತರ ಅವರೊಂದು ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ.

ಈ ಹಿಂದೆ, ‘ರಾಧಾ ಕಲ್ಯಾಣ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಆಶು, ಈಗ ಇನ್ನೊಂದು ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರಕ್ಕೆ ಅವರೇ ಹೀರೋ ಸಹ ಆಗಿದ್ದಾರೆ. ಇತ್ತೀಚೆಗೆ ಅಶು ಬೆದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್‍ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಅಂದಹಾಗೆ, ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಬೆಂಬಲ ಕೊಟ್ಟಿದ್ದು, ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಶೀರ್ಷಿಕೆ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.

ಇದೊಂದು ಹಳ್ಳಿ ಸೊಗಡಿನ ಆ್ಯಕ್ಷನ್‍ ಚಿತ್ರವಾಗಿದ್ದು, ಹೊಡೆದಾಟದ ಸನ್ನಿವೇಶಗಳ ವೀಡಿಯೋ ಬಿಡುಗಡೆ ಮಾಡಲಾಗಿದೆ. ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಒಂದೊಂದೇ ಮಾಹಿತಿಯನ್ನು ಬಿಟ್ಟುಕೊಡಲಿದೆ.

ಅಂದಹಾಗೆ, ಅಶು ಚಿತ್ರರಂಗಕ್ಕೆ ಬಂದಿದ್ದು ‘ಸಿಂಪಲ್‍’ ಸುನಿ ನಿರ್ದೇಶನದ ‘ಸಿಂಪಲ್ಲಾಗ್‍ ಇನ್ನೊಂದು ಲವ್‍ಸ್ಟೋರಿ’ ಚಿತ್ರವನ್ನು ನಿರ್ಮಿಸುವ ಮೂಲಕ. ಹೀಗೆ ಬಂದ ಅವರು, ಇದೀಗ ಮೂರನೇ ಚಿತ್ರದ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ.

ಭೂಮಿಕಾ

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

33 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

38 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

39 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

48 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

1 hour ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

1 hour ago