‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್ ಅಭಿಯದ ‘ಹೆಡ್ ಬುಷ್’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್ ಅವರೇ ವಹಿಸಿಕೊಂಡರು. ಆ ನಂತರ ಅಶು ಬೆದ್ರ ಸುದ್ದಿಯೇ ಇರಲಿಲ್ಲ. ಈಗ ಬಹಳ ದಿನಗಳ ನಂತರ ಅವರೊಂದು ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ.
ಈ ಹಿಂದೆ, ‘ರಾಧಾ ಕಲ್ಯಾಣ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಆಶು, ಈಗ ಇನ್ನೊಂದು ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರಕ್ಕೆ ಅವರೇ ಹೀರೋ ಸಹ ಆಗಿದ್ದಾರೆ. ಇತ್ತೀಚೆಗೆ ಅಶು ಬೆದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ.
ಅಂದಹಾಗೆ, ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಬೆಂಬಲ ಕೊಟ್ಟಿದ್ದು, ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಶೀರ್ಷಿಕೆ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.
ಇದೊಂದು ಹಳ್ಳಿ ಸೊಗಡಿನ ಆ್ಯಕ್ಷನ್ ಚಿತ್ರವಾಗಿದ್ದು, ಹೊಡೆದಾಟದ ಸನ್ನಿವೇಶಗಳ ವೀಡಿಯೋ ಬಿಡುಗಡೆ ಮಾಡಲಾಗಿದೆ. ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಒಂದೊಂದೇ ಮಾಹಿತಿಯನ್ನು ಬಿಟ್ಟುಕೊಡಲಿದೆ.
ಅಂದಹಾಗೆ, ಅಶು ಚಿತ್ರರಂಗಕ್ಕೆ ಬಂದಿದ್ದು ‘ಸಿಂಪಲ್’ ಸುನಿ ನಿರ್ದೇಶನದ ‘ಸಿಂಪಲ್ಲಾಗ್ ಇನ್ನೊಂದು ಲವ್ಸ್ಟೋರಿ’ ಚಿತ್ರವನ್ನು ನಿರ್ಮಿಸುವ ಮೂಲಕ. ಹೀಗೆ ಬಂದ ಅವರು, ಇದೀಗ ಮೂರನೇ ಚಿತ್ರದ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…