‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್ ಅಭಿಯದ ‘ಹೆಡ್ ಬುಷ್’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್ ಅವರೇ ವಹಿಸಿಕೊಂಡರು. ಆ ನಂತರ ಅಶು ಬೆದ್ರ ಸುದ್ದಿಯೇ ಇರಲಿಲ್ಲ. ಈಗ ಬಹಳ ದಿನಗಳ ನಂತರ ಅವರೊಂದು ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ.
ಈ ಹಿಂದೆ, ‘ರಾಧಾ ಕಲ್ಯಾಣ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಆಶು, ಈಗ ಇನ್ನೊಂದು ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರಕ್ಕೆ ಅವರೇ ಹೀರೋ ಸಹ ಆಗಿದ್ದಾರೆ. ಇತ್ತೀಚೆಗೆ ಅಶು ಬೆದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲಾಗಿದೆ.
ಅಂದಹಾಗೆ, ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಬೆಂಬಲ ಕೊಟ್ಟಿದ್ದು, ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಶೀರ್ಷಿಕೆ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.
ಇದೊಂದು ಹಳ್ಳಿ ಸೊಗಡಿನ ಆ್ಯಕ್ಷನ್ ಚಿತ್ರವಾಗಿದ್ದು, ಹೊಡೆದಾಟದ ಸನ್ನಿವೇಶಗಳ ವೀಡಿಯೋ ಬಿಡುಗಡೆ ಮಾಡಲಾಗಿದೆ. ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಒಂದೊಂದೇ ಮಾಹಿತಿಯನ್ನು ಬಿಟ್ಟುಕೊಡಲಿದೆ.
ಅಂದಹಾಗೆ, ಅಶು ಚಿತ್ರರಂಗಕ್ಕೆ ಬಂದಿದ್ದು ‘ಸಿಂಪಲ್’ ಸುನಿ ನಿರ್ದೇಶನದ ‘ಸಿಂಪಲ್ಲಾಗ್ ಇನ್ನೊಂದು ಲವ್ಸ್ಟೋರಿ’ ಚಿತ್ರವನ್ನು ನಿರ್ಮಿಸುವ ಮೂಲಕ. ಹೀಗೆ ಬಂದ ಅವರು, ಇದೀಗ ಮೂರನೇ ಚಿತ್ರದ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…