ಮನರಂಜನೆ

‘ಅಳಿದು ಉಳಿದವರು’ ನಂತರ ಅಶು ಬೆದ್ರ ಇನ್ನೊಂದು ಸಿನಿಮಾ…

‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್‍ ಅಭಿಯದ ‘ಹೆಡ್‍ ಬುಷ್‍’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್‍ ಅವರೇ ವಹಿಸಿಕೊಂಡರು. ಆ ನಂತರ ಅಶು ಬೆದ್ರ ಸುದ್ದಿಯೇ ಇರಲಿಲ್ಲ. ಈಗ ಬಹಳ ದಿನಗಳ ನಂತರ ಅವರೊಂದು ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ.

ಈ ಹಿಂದೆ, ‘ರಾಧಾ ಕಲ್ಯಾಣ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಆಶು, ಈಗ ಇನ್ನೊಂದು ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರಕ್ಕೆ ಅವರೇ ಹೀರೋ ಸಹ ಆಗಿದ್ದಾರೆ. ಇತ್ತೀಚೆಗೆ ಅಶು ಬೆದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್‍ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಅಂದಹಾಗೆ, ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಬೆಂಬಲ ಕೊಟ್ಟಿದ್ದು, ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಶೀರ್ಷಿಕೆ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.

ಇದೊಂದು ಹಳ್ಳಿ ಸೊಗಡಿನ ಆ್ಯಕ್ಷನ್‍ ಚಿತ್ರವಾಗಿದ್ದು, ಹೊಡೆದಾಟದ ಸನ್ನಿವೇಶಗಳ ವೀಡಿಯೋ ಬಿಡುಗಡೆ ಮಾಡಲಾಗಿದೆ. ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಒಂದೊಂದೇ ಮಾಹಿತಿಯನ್ನು ಬಿಟ್ಟುಕೊಡಲಿದೆ.

ಅಂದಹಾಗೆ, ಅಶು ಚಿತ್ರರಂಗಕ್ಕೆ ಬಂದಿದ್ದು ‘ಸಿಂಪಲ್‍’ ಸುನಿ ನಿರ್ದೇಶನದ ‘ಸಿಂಪಲ್ಲಾಗ್‍ ಇನ್ನೊಂದು ಲವ್‍ಸ್ಟೋರಿ’ ಚಿತ್ರವನ್ನು ನಿರ್ಮಿಸುವ ಮೂಲಕ. ಹೀಗೆ ಬಂದ ಅವರು, ಇದೀಗ ಮೂರನೇ ಚಿತ್ರದ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ.

ಭೂಮಿಕಾ

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago