ಮನರಂಜನೆ

‘ಅಳಿದು ಉಳಿದವರು’ ನಂತರ ಅಶು ಬೆದ್ರ ಇನ್ನೊಂದು ಸಿನಿಮಾ…

‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್‍ ಅಭಿಯದ ‘ಹೆಡ್‍ ಬುಷ್‍’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು ಧನಂಜಯ್‍ ಅವರೇ ವಹಿಸಿಕೊಂಡರು. ಆ ನಂತರ ಅಶು ಬೆದ್ರ ಸುದ್ದಿಯೇ ಇರಲಿಲ್ಲ. ಈಗ ಬಹಳ ದಿನಗಳ ನಂತರ ಅವರೊಂದು ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ.

ಈ ಹಿಂದೆ, ‘ರಾಧಾ ಕಲ್ಯಾಣ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ಆಶು, ಈಗ ಇನ್ನೊಂದು ಚಿತ್ರವನ್ನು ನಿರ್ಮಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರಕ್ಕೆ ಅವರೇ ಹೀರೋ ಸಹ ಆಗಿದ್ದಾರೆ. ಇತ್ತೀಚೆಗೆ ಅಶು ಬೆದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೇಕಿಂಗ್‍ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಅಂದಹಾಗೆ, ಅಶು ಬೆದ್ರ ಹೊಸ ಕನಸಿಗೆ ಪ್ರವೀಣ್ ಕಾಡಶೆಟ್ಟಿ ಬೆಂಬಲ ಕೊಟ್ಟಿದ್ದು, ಈ ಚಿತ್ರದ ಮೂಲಕ ಪ್ರವೀಣ್ ನಿರ್ದೇಶಕರಾಗಿ ಆಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸದ್ಯ ಮೇಕಿಂಗ್ ಬಿಡುಗಡೆ ಮಾಡಿರುವ ಚಿತ್ರತಂಡ, ಶೀಘ್ರದಲ್ಲೇ ಶೀರ್ಷಿಕೆ ಜೊತೆಗೆ ಉಳಿದ ತಾರಾಬಳಗ, ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ನೀಡಲಿದೆ.

ಇದೊಂದು ಹಳ್ಳಿ ಸೊಗಡಿನ ಆ್ಯಕ್ಷನ್‍ ಚಿತ್ರವಾಗಿದ್ದು, ಹೊಡೆದಾಟದ ಸನ್ನಿವೇಶಗಳ ವೀಡಿಯೋ ಬಿಡುಗಡೆ ಮಾಡಲಾಗಿದೆ. ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಒಂದೊಂದೇ ಮಾಹಿತಿಯನ್ನು ಬಿಟ್ಟುಕೊಡಲಿದೆ.

ಅಂದಹಾಗೆ, ಅಶು ಚಿತ್ರರಂಗಕ್ಕೆ ಬಂದಿದ್ದು ‘ಸಿಂಪಲ್‍’ ಸುನಿ ನಿರ್ದೇಶನದ ‘ಸಿಂಪಲ್ಲಾಗ್‍ ಇನ್ನೊಂದು ಲವ್‍ಸ್ಟೋರಿ’ ಚಿತ್ರವನ್ನು ನಿರ್ಮಿಸುವ ಮೂಲಕ. ಹೀಗೆ ಬಂದ ಅವರು, ಇದೀಗ ಮೂರನೇ ಚಿತ್ರದ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ.

ಭೂಮಿಕಾ

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

47 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

7 hours ago