ಮನರಂಜನೆ

ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್‍ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರಕ್ಕೆ ಅದೇ ನಂದಿ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿರುವುದು ವಿಶೇಷ. ಈ ಚಿತ್ರಕ್ಕೆ ‘ಡ್ಯಾಡ್‍’ ಎಂದು ಹೆಸರಿಡಲಾಗಿದ್ದು, ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಈ ಚಿತ್ರವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಹರೀಶ್‍ ಪೆದ್ದಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ ತೆಲುಗಿನಲ್ಲಿ ‘ಭಗವಂತ್‍ ಕೇಸರಿ’, ‘ಉಗ್ರಂ’, ‘ಟಕ್‍ ಜಗದೀಶ್‍’ ಮುಂತಾದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ನಿರ್ದೇಶಕ ಅನಿಲ್‍ ಕನ್ನೆಗಂಟಿ ಸಹ ತೆಲುಗು ಮೂಲದವರಾಗಿದ್ದು, ಅವರು ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ-ಚಿತ್ರಕಥೆಯನ್ನೂ ಅವರೇ ರಚಿಸಿದ್ದಾರೆ.

ಇದೊಂದು ತಂದೆ ಸೆಂಟಿಮೆಂಟ್‍ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್‍ ಅಂಶಗಳು ಇರಲಿವೆ. ಶಿವರಾಜಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

‘ಡ್ಯಾಡ್‍’ ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತವಿದೆ. ಬಿ. ರಾಜಶೇಖರ್ ಛಾಯಾಗ್ರಹಣವಿರುವ ಈ ಚಿತ್ರ ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago