At Chamundi Hills Shivanna’s film “Dad” begins shooting.
ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರಕ್ಕೆ ಅದೇ ನಂದಿ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿರುವುದು ವಿಶೇಷ. ಈ ಚಿತ್ರಕ್ಕೆ ‘ಡ್ಯಾಡ್’ ಎಂದು ಹೆಸರಿಡಲಾಗಿದ್ದು, ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಈ ಚಿತ್ರವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಹರೀಶ್ ಪೆದ್ದಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ ತೆಲುಗಿನಲ್ಲಿ ‘ಭಗವಂತ್ ಕೇಸರಿ’, ‘ಉಗ್ರಂ’, ‘ಟಕ್ ಜಗದೀಶ್’ ಮುಂತಾದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ನಿರ್ದೇಶಕ ಅನಿಲ್ ಕನ್ನೆಗಂಟಿ ಸಹ ತೆಲುಗು ಮೂಲದವರಾಗಿದ್ದು, ಅವರು ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ-ಚಿತ್ರಕಥೆಯನ್ನೂ ಅವರೇ ರಚಿಸಿದ್ದಾರೆ.
ಇದೊಂದು ತಂದೆ ಸೆಂಟಿಮೆಂಟ್ ಚಿತ್ರವಾಗಿದ್ದು, ಸಾಕಷ್ಟು ಥ್ರಿಲ್ಲಿಂಗ್ ಅಂಶಗಳು ಇರಲಿವೆ. ಶಿವರಾಜಕುಮಾರ್ ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರಕ್ಕಾಗಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
‘ಡ್ಯಾಡ್’ ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಬಿ. ರಾಜಶೇಖರ್ ಛಾಯಾಗ್ರಹಣವಿರುವ ಈ ಚಿತ್ರ ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…