At Last, Omprakash Rao Completes Shooting of the Film ‘Phoenix’
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ನಿರ್ದೇಶನದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಲಿಲ್ಲ.
ಈ ಮಧ್ಯೆ, ಅವರು ಕೆಲವು ಚಿತ್ರಗಳನ್ನು ಘೋಷಿಸಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಘೋಷಣೆಯಾದ ಚಿತ್ರಗಳು ಬಿಡುಗಡೆಯಾಗಿದ್ದರೆ, ಅವರು ಇಷ್ಟರಲ್ಲಿ ಹಾಫ್ ಸೆಂಚ್ಯುರಿ ಮುಗಿಸಿರುತ್ತಿದ್ದರು. ಕಾರಣಾಂತರಗಳಿಂದ ಅದು ತಡವಾಗಿ, ಅವರು ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ್ದ 49ನೇ ಚಿತ್ರವಾದ ‘ಫೀನಿಕ್ಸ್’ ಇದೀಗ ಮುಕ್ತಾಯವಾಗಿದೆ.
ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರ ‘ಫೀನಿಕ್ಸ್’. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ ‘ಫೀನಿಕ್ಸ್’ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.
ಈ ಚಿತ್ರನ ನಿರ್ದೇಶನದ ಜೊತೆಗೆ ಓಂಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ‘ಫೀನಿಕ್ಸ್’ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.
‘ಫೀನಿಕ್ಸ್’ ಕುರಿತು ಮುಹೂರ್ತ ಸಂದರ್ಭದಲ್ಲಿ ಮಾತನಾಡಿದ್ದ ಓಂಪ್ರಕಾಶ್ ರಾವ್, ‘ಇದೊಂದು ಮಹಿಳಾ ಪ್ರಧಾನ ಚಿತ್ರ. ಮೊದಲ ಬಾರಿಗೆ ನಾನು ಕ್ರೈಮ್ ಥ್ರಿಲ್ಲರ್ ಚಿತ್ರ ಮಾಡುತ್ತಿದ್ದೇನೆ. ಈ ಚಿತ್ರವು ಕೆಲವು ನೈಜ ಘಟನೆಗಳನ್ನು ಆಧರಿಸಿದೆ’ ಎಂದು ಹೇಳಿದ್ದರು.
‘ಫೀನಿಕ್ಸ್’ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ‘ಸಿದ್ಲಿಂಗು’ ಶ್ರೀಧರ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…