ಮನರಂಜನೆ

ಕೊನೆಗೂ ‘ಫೀನಿಕ್ಸ್’ ಚಿತ್ರದ ಚಿತ್ರೀಕರಣ ಮುಗಿಸಿದ ಓಂಪ್ರಕಾಶ್ ರಾವ್‍

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ‍ನಿರ್ದೇಶನದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಲಿಲ್ಲ.

ಈ ಮಧ್ಯೆ, ಅವರು ಕೆಲವು ಚಿತ್ರಗಳನ್ನು ಘೋಷಿಸಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಘೋಷಣೆಯಾದ ಚಿತ್ರಗಳು ಬಿಡುಗಡೆಯಾಗಿದ್ದರೆ, ಅವರು ಇಷ್ಟರಲ್ಲಿ ಹಾಫ್‍ ಸೆಂಚ್ಯುರಿ ಮುಗಿಸಿರುತ್ತಿದ್ದರು. ಕಾರಣಾಂತರಗಳಿಂದ ಅದು ತಡವಾಗಿ, ಅವರು ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ್ದ 49ನೇ ಚಿತ್ರವಾದ ‘ಫೀನಿಕ್ಸ್’ ಇದೀಗ ಮುಕ್ತಾಯವಾಗಿದೆ.

ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರ ‘ಫೀನಿಕ್ಸ್’. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ ‘ಫೀನಿಕ್ಸ್’ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಈ ಚಿತ್ರನ ನಿರ್ದೇಶನದ ಜೊತೆಗೆ ಓಂಪ್ರಕಾಶ್‍ ರಾವ್‍ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ‘ಫೀನಿಕ್ಸ್’ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.

‘ಫೀನಿಕ್ಸ್’ ಕುರಿತು ಮುಹೂರ್ತ ಸಂದರ್ಭದಲ್ಲಿ ಮಾತನಾಡಿದ್ದ ಓಂಪ್ರಕಾಶ್‍ ರಾವ್,‍ ‘ಇದೊಂದು ಮಹಿಳಾ ಪ್ರಧಾನ ಚಿತ್ರ. ಮೊದಲ ಬಾರಿಗೆ ನಾನು ಕ್ರೈಮ್‍ ಥ್ರಿಲ್ಲರ್‍ ಚಿತ್ರ ಮಾಡುತ್ತಿದ್ದೇನೆ. ಈ ಚಿತ್ರವು ಕೆಲವು ನೈಜ ಘಟನೆಗಳನ್ನು ಆಧರಿಸಿದೆ’ ಎಂದು ಹೇಳಿದ್ದರು.

‘ಫೀನಿಕ್ಸ್’ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ‘ಸಿದ್ಲಿಂಗು’ ಶ್ರೀಧರ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

26 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

52 mins ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

58 mins ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

1 hour ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

1 hour ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago