ಮನರಂಜನೆ

ಕೊನೆಗೂ ‘ಫೀನಿಕ್ಸ್’ ಚಿತ್ರದ ಚಿತ್ರೀಕರಣ ಮುಗಿಸಿದ ಓಂಪ್ರಕಾಶ್ ರಾವ್‍

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ‍ನಿರ್ದೇಶನದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಲಿಲ್ಲ.

ಈ ಮಧ್ಯೆ, ಅವರು ಕೆಲವು ಚಿತ್ರಗಳನ್ನು ಘೋಷಿಸಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಘೋಷಣೆಯಾದ ಚಿತ್ರಗಳು ಬಿಡುಗಡೆಯಾಗಿದ್ದರೆ, ಅವರು ಇಷ್ಟರಲ್ಲಿ ಹಾಫ್‍ ಸೆಂಚ್ಯುರಿ ಮುಗಿಸಿರುತ್ತಿದ್ದರು. ಕಾರಣಾಂತರಗಳಿಂದ ಅದು ತಡವಾಗಿ, ಅವರು ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ್ದ 49ನೇ ಚಿತ್ರವಾದ ‘ಫೀನಿಕ್ಸ್’ ಇದೀಗ ಮುಕ್ತಾಯವಾಗಿದೆ.

ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರ ‘ಫೀನಿಕ್ಸ್’. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ ‘ಫೀನಿಕ್ಸ್’ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಈ ಚಿತ್ರನ ನಿರ್ದೇಶನದ ಜೊತೆಗೆ ಓಂಪ್ರಕಾಶ್‍ ರಾವ್‍ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ‘ಫೀನಿಕ್ಸ್’ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.

‘ಫೀನಿಕ್ಸ್’ ಕುರಿತು ಮುಹೂರ್ತ ಸಂದರ್ಭದಲ್ಲಿ ಮಾತನಾಡಿದ್ದ ಓಂಪ್ರಕಾಶ್‍ ರಾವ್,‍ ‘ಇದೊಂದು ಮಹಿಳಾ ಪ್ರಧಾನ ಚಿತ್ರ. ಮೊದಲ ಬಾರಿಗೆ ನಾನು ಕ್ರೈಮ್‍ ಥ್ರಿಲ್ಲರ್‍ ಚಿತ್ರ ಮಾಡುತ್ತಿದ್ದೇನೆ. ಈ ಚಿತ್ರವು ಕೆಲವು ನೈಜ ಘಟನೆಗಳನ್ನು ಆಧರಿಸಿದೆ’ ಎಂದು ಹೇಳಿದ್ದರು.

‘ಫೀನಿಕ್ಸ್’ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ‘ಸಿದ್ಲಿಂಗು’ ಶ್ರೀಧರ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

7 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago