ಮನರಂಜನೆ

ಕೊನೆಗೂ ‘ಫೀನಿಕ್ಸ್’ ಚಿತ್ರದ ಚಿತ್ರೀಕರಣ ಮುಗಿಸಿದ ಓಂಪ್ರಕಾಶ್ ರಾವ್‍

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ‍ನಿರ್ದೇಶನದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಲಿಲ್ಲ.

ಈ ಮಧ್ಯೆ, ಅವರು ಕೆಲವು ಚಿತ್ರಗಳನ್ನು ಘೋಷಿಸಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಘೋಷಣೆಯಾದ ಚಿತ್ರಗಳು ಬಿಡುಗಡೆಯಾಗಿದ್ದರೆ, ಅವರು ಇಷ್ಟರಲ್ಲಿ ಹಾಫ್‍ ಸೆಂಚ್ಯುರಿ ಮುಗಿಸಿರುತ್ತಿದ್ದರು. ಕಾರಣಾಂತರಗಳಿಂದ ಅದು ತಡವಾಗಿ, ಅವರು ಒಂದೂವರೆ ವರ್ಷಗಳ ಹಿಂದೆ ಪ್ರಾರಂಭಿಸಿದ್ದ 49ನೇ ಚಿತ್ರವಾದ ‘ಫೀನಿಕ್ಸ್’ ಇದೀಗ ಮುಕ್ತಾಯವಾಗಿದೆ.

ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ನಿರ್ಮಾಣ ಮಾಡುತ್ತಿರುವ ಚಿತ್ರ ‘ಫೀನಿಕ್ಸ್’. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ ‘ಫೀನಿಕ್ಸ್’ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಈ ಚಿತ್ರನ ನಿರ್ದೇಶನದ ಜೊತೆಗೆ ಓಂಪ್ರಕಾಶ್‍ ರಾವ್‍ ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ದೀಪು ಪಿ.ಆರ್ ಬರೆದಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನವಿರುವ ‘ಫೀನಿಕ್ಸ್’ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.

‘ಫೀನಿಕ್ಸ್’ ಕುರಿತು ಮುಹೂರ್ತ ಸಂದರ್ಭದಲ್ಲಿ ಮಾತನಾಡಿದ್ದ ಓಂಪ್ರಕಾಶ್‍ ರಾವ್,‍ ‘ಇದೊಂದು ಮಹಿಳಾ ಪ್ರಧಾನ ಚಿತ್ರ. ಮೊದಲ ಬಾರಿಗೆ ನಾನು ಕ್ರೈಮ್‍ ಥ್ರಿಲ್ಲರ್‍ ಚಿತ್ರ ಮಾಡುತ್ತಿದ್ದೇನೆ. ಈ ಚಿತ್ರವು ಕೆಲವು ನೈಜ ಘಟನೆಗಳನ್ನು ಆಧರಿಸಿದೆ’ ಎಂದು ಹೇಳಿದ್ದರು.

‘ಫೀನಿಕ್ಸ್’ ಚಿತ್ರದಲ್ಲಿ ನಿಮಿಕಾ ರತ್ನಾಕರ್, ಭಾಸ್ಕರ್ ಶೆಟ್ಟಿ, ಕೃತಿಕ ಲೋಗೊ, ಎಸ್ತರ್ ನರೋನ, ರಂಗಾಯಣ ರಘು, ಅವಿನಾಶ್, ಚಿತ್ರಾ ಶೆಣೈ, ‘ಸಿದ್ಲಿಂಗು’ ಶ್ರೀಧರ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

5 hours ago