ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್ ನಟ ಶಾರೂಖ್ ಖಾನ್ ಅಭಿನಯದಲ್ಲಿ ‘ಪಠಾನ್’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.
ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್ ಖಾನ್ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್ ಹಾಸನ್ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.
ಇದೊಂದು ಆ್ಯಕ್ಷನ್ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.
ಈ ಚಿತ್ರದ ಒಂದು ಸೆಟ್ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್ನ್ನು ಸಹ ಹಾಕಲಾಗುತ್ತದಂತೆ.
ಸದ್ಯ ಸಲ್ಮಾನ್ ಖಾನ್, ಎ.ಆರ್. ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್ ಶೆಟ್ಟಿ, ಸತ್ಯರಾಜ್, ಪ್ರತೀಕ್ ಬಬ್ಬರ್ ಮುಂತಾದವರು ನಟಿಸುತ್ತಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…