ಮನರಂಜನೆ

ಶಾರೂಖ್‍ ಆಯ್ತು ಈಗ ಸಲ್ಮಾನ್‍ ಖಾನ್‍ಗೆ ಅಟ್ಲಿ ನಿರ್ದೇಶನ

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.

ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್‍ ಖಾನ್‍ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್‍ ಹಾಸನ್‍ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದೊಂದು ಆ್ಯಕ್ಷನ್‍ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಒಂದು ಸೆಟ್‍ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್‍ನ್ನು ಸಹ ಹಾಕಲಾಗುತ್ತದಂತೆ.

ಸದ್ಯ ಸಲ್ಮಾನ್‍ ಖಾನ್‍, ಎ.ಆರ್. ಮುರುಗದಾಸ್‍ ನಿರ್ದೇಶನದ ‘ಸಿಕಂದರ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್‍ ಖಾನ್‍ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್‍ ಶೆಟ್ಟಿ, ಸತ್ಯರಾಜ್‍, ಪ್ರತೀಕ್‍ ಬಬ್ಬರ್‍ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

5 hours ago