ಮನರಂಜನೆ

ಶಾರೂಖ್‍ ಆಯ್ತು ಈಗ ಸಲ್ಮಾನ್‍ ಖಾನ್‍ಗೆ ಅಟ್ಲಿ ನಿರ್ದೇಶನ

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.

ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್‍ ಖಾನ್‍ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್‍ ಹಾಸನ್‍ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದೊಂದು ಆ್ಯಕ್ಷನ್‍ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಒಂದು ಸೆಟ್‍ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್‍ನ್ನು ಸಹ ಹಾಕಲಾಗುತ್ತದಂತೆ.

ಸದ್ಯ ಸಲ್ಮಾನ್‍ ಖಾನ್‍, ಎ.ಆರ್. ಮುರುಗದಾಸ್‍ ನಿರ್ದೇಶನದ ‘ಸಿಕಂದರ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್‍ ಖಾನ್‍ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್‍ ಶೆಟ್ಟಿ, ಸತ್ಯರಾಜ್‍, ಪ್ರತೀಕ್‍ ಬಬ್ಬರ್‍ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

8 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

9 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

9 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

10 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

10 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

12 hours ago