ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್ ನಟ ಶಾರೂಖ್ ಖಾನ್ ಅಭಿನಯದಲ್ಲಿ ‘ಪಠಾನ್’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.
ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್ ಖಾನ್ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್ ಹಾಸನ್ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.
ಇದೊಂದು ಆ್ಯಕ್ಷನ್ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.
ಈ ಚಿತ್ರದ ಒಂದು ಸೆಟ್ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್ನ್ನು ಸಹ ಹಾಕಲಾಗುತ್ತದಂತೆ.
ಸದ್ಯ ಸಲ್ಮಾನ್ ಖಾನ್, ಎ.ಆರ್. ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್ ಶೆಟ್ಟಿ, ಸತ್ಯರಾಜ್, ಪ್ರತೀಕ್ ಬಬ್ಬರ್ ಮುಂತಾದವರು ನಟಿಸುತ್ತಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…