ಮನರಂಜನೆ

ಶಾರೂಖ್‍ ಆಯ್ತು ಈಗ ಸಲ್ಮಾನ್‍ ಖಾನ್‍ಗೆ ಅಟ್ಲಿ ನಿರ್ದೇಶನ

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.

ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್‍ ಖಾನ್‍ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್‍ ಹಾಸನ್‍ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದೊಂದು ಆ್ಯಕ್ಷನ್‍ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಒಂದು ಸೆಟ್‍ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್‍ನ್ನು ಸಹ ಹಾಕಲಾಗುತ್ತದಂತೆ.

ಸದ್ಯ ಸಲ್ಮಾನ್‍ ಖಾನ್‍, ಎ.ಆರ್. ಮುರುಗದಾಸ್‍ ನಿರ್ದೇಶನದ ‘ಸಿಕಂದರ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್‍ ಖಾನ್‍ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್‍ ಶೆಟ್ಟಿ, ಸತ್ಯರಾಜ್‍, ಪ್ರತೀಕ್‍ ಬಬ್ಬರ್‍ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago